Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 15 ಮೇ 2021 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಂಧು ಮಿತ್ರರ ಚಾಡಿ ಮಾತುಗಳಿಂದ ತೊಂದರೆಯಾದೀತು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಯಾರ ಜೊತೆಗೂ ಸಂಘರ್ಷಕ್ಕಿಳಿಯುವುದು ಬೇಡ. ತಾಳ್ಮೆ,ಸಂಯಮವೇ ಮುಖ್ಯವಾಗಲಿದೆ.

ವೃಷಭ: ವಿದ್ಯಾರ್ಥಿಗಳು ಉತ್ತಮ ಸ್ನೇಹ ಸಂಗ ಮಾಡುವುದು ಮುಖ‍್ಯವಾಗಲಿದೆ. ಅಭ್ಯಾಸದ ಕಡೆಗೆ ಗಮನ ಕಡಿಮೆ ಆಗದಿರಲಿ. ಸ್ವಯಂ ಉದ್ಯೋಗಿಗಳಿಗೆ ಭವಿಷ್ಯದ ದಾರಿ ಬಗ್ಗೆ ಚಿಂತೆಯಾದೀತು. ಖರ್ಚು ವೆಚ್ಚದ ಬಗ್ಗೆ ನಿಯಂತ್ರಣವಿರಲಿ.

ಮಿಥುನ: ಸಾಂಸಾರಿಕವಾಗಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಸರಿಪಡಿಸಿಕೊಂಡು ಹೋಗಬೇಕಾಗುತ್ತದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಲಾಭವಾದೀತು.

ಕರ್ಕಟಕ: ವೃತ್ತಿರಂಗದಲ್ಲಿ ಚೇತರಿಕೆಯ ವಾತಾವರಣ ಕಂಡುಬರಲಿದೆ. ನಿರುದ್ಯೋಗಿಗಳು ಇದುವರೆಗೆ ಪಟ್ಟ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಸಾಮಾಜಿಕವಾಗಿ ಹೊಸಬರ ಭೇಟಿಯಿಂದ ನಿಮ್ಮ ಕಾರ್ಯಾನುಕೂಲವಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ತಪ್ಪಾದ ದಾರಿಯಲ್ಲಿ ನಡೆಯುವಾಗ ಸಂಗಾತಿಯು ನಿಮಗೆ ಎಚ್ಚರಿಕೆ ಕೊಡಲಿದ್ದಾರೆ. ಹಿರಿಯರ ಸಲಹೆಗಳನ್ನು ಪಾಲಿಸಿರಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಕಿರು ಓಡಾಟ ನಡೆಸಲಿದ್ದೀರಿ.

ಕನ್ಯಾ: ಆರ್ಥಿಕವಾಗಿ ನಿಮ್ಮ ಲೆಕ್ಕಾಚಾರಗಳು ತಲೆಕೆಳಗಾಗುವ ಸಂದರ್ಭ ಎದುರಾಗಲಿದೆ. ಕೌಟುಂಬಿಕವಾಗಿ ಅಭಿವೃದ್ಧಿಗೆ ಅವಕಾಶಗಳು ತೋರಿಬರಲಿವೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯಾದರೂ ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಮಾನಸಿಕವಾಗಿ ನಿಮ್ಮ ಸುಖ-ದುಃಖಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ.

ವೃಶ್ಚಿಕ: ವ್ಯಾಪಾರಿಗಳಿಗೆ ಇದು ಸಕಾಲವಲ್ಲ. ಆರ್ಥಿಕವಾಗಿ ಸಂಕಷ್ಟಕ್ಕೀಡಾಗಲಿದ್ದೀರಿ. ಹೊಸ ದಾರಿಗಳನ್ನು ಹುಡುಕಬೇಕಾಗುತ್ತದೆ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು. ತಾಳ್ಮೆ, ಸಂಯಮ ಮುಖ್ಯ.

ಧನು: ಹೊಸ ವಸ್ತು, ಭೂಮಿ ಖರೀದಿಗೆ ಕೆಲವು ದಿನ ಕಾಯುವುದು ಉತ್ತಮ. ನೆರೆಹೊರೆಯವರೊಂದಿಗೆ ಸಂಘರ್ಷವಾಗದಂತೆ ಎಚ್ಚರಿಕೆ ವಹಿಸಿ. ದೂರ ಪ್ರಯಾಣಗಳನ್ನು ರದ್ದುಗೊಳಿಸಲಿದ್ದೀರಿ. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಮಕರ: ಮಕ್ಕಳ ವಿದ್ಯಾಭ್ಯಾಸದ ಬಗೆಗಿನ ಗೊಂದಲಗಳು ಚಿಂತೆಗೆ ಕಾರಣವಾಗಲಿದೆ. ವೈದ್ಯಕೀಯ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು. ಕೃಷಿಕರಿಗೆ ವ್ಯವಹಾರದಲ್ಲಿ ಸಮಾನ ಫಲ ಅನುಭವಿಸಬೇಕಾಗುತ್ತದೆ.

ಕುಂಭ: ನಾಲಿಗೆ ಚಪಲದಿಂದ ದೇಹಾರೋಗ್ಯದಲ್ಲಿ ಏರುಪೇರಾದೀತು. ಅನಿರೀಕ್ಷಿತ ಖರ್ಚು ವೆಚ್ಚಗಳು ಹೈರಾಣಾಗಿಸಲಿದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮಕ್ಕಳ ದೇಹಾರೋಗ್ಯದ ಬಗ್ಗೆ ಗಮನವಿರಲಿ.

ಮೀನ: ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಉದ್ಯೋಗ ಲಾಭವಾಗಲಿದೆ. ಪ್ರೀತಿ ಪಾತ್ರರ ಭೇಟಿಗೆ ಮನಸ್ಸು ಹಾತೊರೆಯಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ