Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 9 ಜೂನ್ 2021 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೀವು ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬಂದೀತು. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ವೃಷಭ: ಕಾರ್ಯರಂಗದಲ್ಲಿ ಸಹೋದ್ಯೋಗಿಗಳ ಹೊಣೆಗೇಡಿತನಕ್ಕೆ ನೀವು ಬೆಲೆ ತೆರಬೇಕಾದ ಪರಿಸ್ಥಿತಿ ಬಂದೀತು. ಕೌಟುಂಬಿಕವಾಗಿ ಕಷ್ಟದ ಸಂದರ್ಭದಲ್ಲಿ ಸಂಗಾತಿಯ ಸಹಾಯ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಕೆಲವೊಮ್ಮೆ ವೈಯಕ್ತಿಕ ಸುಖ ತ್ಯಾಗ ಮಾಡಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಾನಸಿಕವಾಗಿ ಕಾಡುತ್ತಿರುವ ಗೊಂದಲಗಳಿಗೆ ಹಿರಿಯರಿಂದ ಸಮಾಧಾನ ಸಿಗಲಿದೆ.

ಕರ್ಕಟಕ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ಕೂಡಿಬರಲಿದೆ. ವೃತ್ತಿರಂಗದಲ್ಲಿ ಕಾರ್ಯದೊತ್ತಡ ಅಧಿಕವಾಗಲಿದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಹಿಂದೆ ಮಾಡಿದ ತಪ್ಪುಗಳಿಗೆ ಬೆಲೆ ತೆರಬೇಕಾದ ಸಂದರ್ಭ ಬಂದೀತು. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಸಾರ್ವಜನಿಕವಾಗಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಕನ್ಯಾ: ಅತಿಯಾದ ಸಲುಗೆಯೂ ಕೆಲವೊಮ್ಮೆ ಮನಸ್ತಾಪಕ್ಕೆ ದಾರಿಯಾದೀತು. ಸ್ನೇಹಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಮೇಲಧಿಕಾರಿಗಳಿಂದ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮ ಆದಾಯ ವೃದ್ಧಿಗೆ ನಾನಾ ದಾರಿಗಳನ್ನು ಹುಡುಕಾಡಲಿದ್ದೀರಿ. ಸಾಲಗಾರರ ಕಾಟ ಚಿಂತೆಗೆ ಕಾರಣವಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ನಿರುದ್ಯೋಗಿಗಳು ಸ್ವಯಂ ವೃತ್ತಿಯ ಬಗ್ಗೆ ಚಿಂತಿಸಲಿದ್ದಾರೆ.

ವೃಶ್ಚಿಕ: ನಿಮ್ಮ ಹಠಕ್ಕೆ ಬಿದ್ದು ಅನಗತ್ಯವಾಗಿ ಕಷ್ಟಕ್ಕೆ ಸಿಲುಕಿಕೊಳ್ಳದಿರಿ. ಆತ್ಮೀಯರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಪ್ರತಿಕೂಲ ವಾತಾವರಣವಿರಲಿದೆ. ತಾಳ್ಮೆಯಿರಲಿ.

ಧನು: ಮನಸ್ಸಿನ ಭಾವನೆಗಳನ್ನು ಆತ್ಮೀಯರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಇತರರು ನಿಮ್ಮ ಬಗ್ಗೆ ಆಡಿಕೊಳ್ಳಲು ಅವಕಾಶ ಮಾಡಿಕೊಡದಿರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮಕರ: ವ್ಯವಹಾರ ಕ್ಷೇತ್ರದಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳದಿದ್ದರೆ ನಷ್ಟವಾದೀತು. ಕಟ್ಟಡ-ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ತೆರೆದುಕೊಳ್ಳಲಿವೆ. ತಾಳ್ಮೆಯಿರಲಿ.

ಕುಂಭ: ನಿಮ್ಮ ಮನಸ್ಸಿನ ದುಃಖವನ್ನು ಆತ್ಮೀಯರೊಂದಿಗೆ ಹಂಚಿಕೊಂಡು ಪರಿಹಾರ ಕಂಡುಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ಏರುಪೇರು ಸಾಮಾನ್ಯ. ತಾಳ್ಮೆ, ಸಂಯಮದಿಂದ ನಿಭಾಯಿಸಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದೆ.

ಮೀನ: ಎಂತಹ ಸಮಸ್ಯೆ ಬಂದರೂ ತಾಳ್ಮೆಯಿಂದ ನಿಭಾಯಿಸಬೇಕು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಅಡೆತಡೆಗಳು ಬಂದೀತು. ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ