Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 10 ಜೂನ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಏರಿಳಿತಗಳು ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆಯಿರಬೇಕು. ಏನೋ ಮಾಡಲು ಹೋಗಿ ಅಪಮಾನಕ್ಕೀಡಾಗುವ ಪ್ರಸಂಗವೂ ಎದುರಾದೀತು. ತಾಳ್ಮೆಯಿರಲಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಸೂಕ್ತ ಸಮಯದಲ್ಲಿ ಸಂಗಾತಿಯು ಕೊಡುವ ಸಲಹೆಗಳು ನಿಮಗೆ ಉಪಯೋಗಕ್ಕೆ ಬರಲಿದೆ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಭಾವ ಹೆಚ್ಚಲಿದೆ. ಸ್ತ್ರೀಯರಿಗೆ ಕೌಟುಂಬಿಕ ಸಮಸ್ಯೆಗಳು ತಲೆನೋವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಕೆಲಸದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ದೂರ ಪ್ರಯಾಣಗಳನ್ನು ಕೆಲವು ದಿನ ಮುಂದೂಡುವುದು ಒಳಿತು.

ಕರ್ಕಟಕ: ನಿರುದ್ಯೋಗಿಗಳಿಗೆ ಪಾಲಿಗೆ ಬಂದಿದ್ದು ಪಂಚಾಮೃತ ಎಂದುಕೊಳ್ಳಬೇಕಾದ ಪರಿಸ್ಥಿತಿ. ಹೊಸ ಯೋಜನೆಗಳಿಗೆ ಆರ್ಥಿಕ ಅಡಚಣೆಗಳು ಕಂಡುಬಂದೀತು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಚಿಂತೆ ಬೇಡ.

ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಕೆಲಸಕ್ಕೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ವೈಯಕ್ತಿಕ ನಿಂದನೆ ಮಾಡಲು ಹೋಗಬೇಡಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕಿರು ಸಂಚಾರ ಮಾಡುವಿರಿ.

ಕನ್ಯಾ: ಅತಿಯಾದ ವಿಶ್ವಾಸವೂ ತೊಂದರೆಗೆ ಕಾರಣವಾದೀತು. ಮೋಸ ವಂಚನೆಗಳಾದಾಗ ಅದನ್ನು ಖಂಡಿಸುವ ಪ್ರವೃತ್ತಿ ತೋರಿಸಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಪ್ರೀತಿ ಪಾತ್ರರಿಗೆ ಉಡುಗೊರೆ ಕೊಡಲಿದ್ದೀರಿ.

ತುಲಾ: ಸಾಂಸಾರಿಕ ಸುಖಕ್ಕೆ ಕೊರತೆಯಿರದು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸಾಮಾಜಿಕವಾಗಿ ಜನ ಮನ್ನಣೆಗೆ ಪಾತ್ರರಾಗಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಖರ್ಚು ವೆಚ್ಚದ ಬಗ್ಗೆ ಜಾಗ್ರತೆಯಿರಲಿ.

ವೃಶ್ಚಿಕ: ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಿರದು. ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಧನು: ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಮಯ ಮುಂದಾಗಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಐಶಾರಾಮಿ ಜೀವನದ ಕನಸು ಕಾಣಲಿದ್ದೀರಿ. ತಾಳ್ಮೆಯಿರಲಿ.

ಮಕರ: ಕೌಟುಂಬಿಕವಾಗಿ ನೀವು ಕೈಗೊಳ್ಳುವ ನಿರ್ಧಾರಗಳು ಇತರರಿಗೆ ಇಷ್ಟವಾಗದೇ ಹೋದೀತು. ಸಂಗಾತಿಯೊಂದಿಗೆ ಸಂಯಮದಿಂದ ನಡೆದುಕೊಳ್ಳಿ. ಶೈಕ್ಷಣಿಕ ರಂಗದಲ್ಲಿರುವವರಿಗೆ ಭವಿಷ್ಯದ ಭೀತಿ ಕಾಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ. ಹಿರಿಯರಿಗೆ ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಲಿದೆ. ಆರ್ಥಿಕವಾಗಿ ಹೊಸ ಯೋಜನೆ ಕೈಗೊಳ್ಳಲು ಕೆಲವು ದಿನ ಕಾಯಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮೀನ: ಇಂದು ನೀವು ಕೈಗೊಳ್ಳುವ ನಿರ್ಧಾರಗಳು ಮುಂದೊಂದು ದಿನ ನಿಮ್ಮ ಭವಿಷ್ಯ ನಿರ್ಧರಿಸಲಿದೆ. ಮಹಿಳೆಯರಿಗೆ ಹಿರಿಯರಿಂದ ಬಳವಳಿ ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರುವುದು. ಆಪ್ತ ಮಿತ್ರರ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ