Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 23 ಜೂನ್ 2021 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬೇರೆಯವರ ತಪ್ಪಿಗೆ ನೀವು ತಲೆದಂಡ ತೆರಬೇಕಾದ ಪರಿಸ್ಥಿತಿ ಎದುರಾದೀತು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ತಾಳ್ಮೆ, ಸಂಯಮದಿಂದ ವರ್ತಿಸಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ವೃಷಭ: ನಿಮ್ಮ ದೇಹದಲ್ಲಿ ಆಗುವ ಕೆಲವೊಂದು ಬದಲಾವಣೆಗಳು ಚಿಂತೆಗೆ ಕಾರಣವಾದೀತು. ಸರಿಯಾದ ನಿರ್ಧಾರ ತೆಗೆದುಕೊಳ್ಳುವುದು ಮುಖ್ಯ. ಸಂಗಾತಿಯೊಂದಿಗೆ ನಿಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳಲಿದ್ದೀರಿ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಭವಿಷ್ಯಕ್ಕೆ ಪೂರಕವಾದ ಅವಕಾಶಗಳು  ಒದಗಿಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಇಷ್ಟ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಪಡೆಯಲಿದ್ದಾರೆ.

ಕರ್ಕಟಕ: ನಿಮ್ಮ ವಿಚಾರಧಾರೆಗಳಿಗೆ ಸೂಕ್ತ ಬೆಲೆ ಸಿಗದೇ ಇದ್ದಾಗ ಬೇಸರವಾದೀತು. ವಾಹನ ಸವಾರರು ಪ್ರಯಾಣದಲ್ಲಿ ಎಚ್ಚರಿಕೆ ವಹಿಸಬೇಕು. ನೆರೆಹೊರೆಯವರೊಂದಿಗೆ ಇದುವರೆಗೆ ಇದ್ದ ಸಣ್ಣ ಪುಟ್ಟ ಮನಸ್ತಾಪಗಳು ಪರಿಹಾರವಾಗಲಿದೆ.

ಸಿಂಹ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.

ಕನ್ಯಾ: ಪಾಲು ಬಂಡವಾಳ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಭವಿಷ್ಯದ ಯೋಜನೆಗೆ ತಯಾರಿ ನಡೆಸಬೇಕಾಗುತ್ತದೆ.

ತುಲಾ: ನಿಮ್ಮ ಅದೃಷ್ಟದಿಂದ ನೀವು ಕೈ ಹಿಡಿದ ಕೆಲಸಗಳು ಯಶಸ್ವಿಯಾಗಿ ಪೂರ್ತಿಯಾಗಲಿದೆ. ದಾಯಾದಿ ಕಲಹಗಳು ಪರಿಹಾರವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮೇಲುಗೈಯಾದೀತು. ಕಿರು ಸಂಚಾರ ಮಾಡುವಿರಿ.

ವೃಶ್ಚಿಕ: ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳಲ್ಲಿ ಮೂರನೆಯವರು ಮೂಗು ತೂರಿಸುವುದರಿಂದ ಕಿರಿ ಕಿರಿಯಾದೀತು. ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ. ವ್ಯಾಪಾರಿಗಳಿಗೆ ಚೇತರಿಕೆ ಕಂಡುಬರಲಿದೆ.

ಧನು: ಹಿಂದೆ ಮಾಡಿದ ತಪ್ಪುಗಳಿಗೆ ಪ್ರಾಯಶ್ಚಿತ ಮಾಡಿಕೊಳ್ಳಲಿದ್ದೀರಿ. ಮಕ್ಕಳ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಬೇಕಾದೀತು. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮಕರ: ಮಹಿಳೆಯರಿಗೆ ಮಂಗಲ ಕಾರ್ಯಕ್ಕೆ ಚಿನ್ನಾಭರಣ ಖರೀದಿ ಮಾಡುವ ಯೋಗ ಕೂಡಿಬರಲಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ ಹೆಚ್ಚಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಕುಂಭ: ಆತ್ಮೀಯರೊಂದಿಗೆ ಮನಸ್ಸು ಬಿಚ್ಚಿ ಮಾತನಾಡುವುದರಿಂದ ನಿಮ್ಮ ದುಃಖ-ದುಮ್ಮಾನಗಳು ದೂರವಾಗಲಿದೆ. ಮಕ್ಕಳ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯೊಂದಿಗೆ ಪರಾಮರ್ಶಿಸಿ. ಕುಲದೇವರ ಪ್ರಾರ್ಥನೆ ಮಾಡುವುದು ಉತ್ತಮ.

ಮೀನ: ನೂತನ ಕಟ್ಟಡ ಕಾಮಗಾರಿ ಕೆಲಸಗಳಿಗೆ ಆರ್ಥಿಕವಾಗಿ ಅಡಚಣೆಯಿಂದಾಗಿ ಅಡ್ಡಿ ಎದುರಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments