ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 1 ಜುಲೈ 2021 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ನಿಮ್ಮ ವರ್ತನೆ ನೋಡಿದರೆ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ ಎನಿಸಬಹುದು. ಅನಗತ್ಯ ಚಿಂತೆಗಳಲ್ಲಿ ಕಳೆದುಹೋಗಬೇಡಿ. ಉದಾಸೀನ ಪ್ರವೃತ್ತಿ ಬಿಟ್ಟು ಕೆಲಸಗಳಲ್ಲಿ ತೊಡಗಿಸಿಕೊಂಡರೆ ಯಶಸ್ಸು ಸಿಗಲಿದೆ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಯೋಜನೆ ಹಾಕಿಕೊಳ್ಳಲಿದ್ದೀರಿ. ಅನಿವಾರ್ಯ ಕಾರಣಗಳಿಂದ ದೂರ ಪ್ರಯಾಣ ಮುಂದೂಡಬೇಕಾದೀತು. ದೇಹಾರೋಗ್ಯ ಬಗ್ಗೆ ಕಾಳಜಿ ವಹಿಸಿ.

ಮಿಥುನ: ಅತಿಯಾಗಿ ನಿಮ್ಮನ್ನು ಹೊಗಳುವವರಿಂದ ದೂರವಿದ್ದರೇ ಉತ್ತಮ. ವ್ಯವಹಾರದಲ್ಲಿ ಹಿತ ಶತ್ರುಗಳ ಕಾಟ ಕಂಡುಬಂದೀತು. ತಾಳ್ಮೆ, ಸಂಯಮದಿಂದ ನಿಭಾಯಿಸಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗುವುದು.

ಕರ್ಕಟಕ: ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾಗಲಿದ್ದು, ಚಿಂತೆಗೆ ಕಾರಣವಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ನಿಮ್ಮದಾಗುವುದು. ನಿಮ್ಮ ಇಚ್ಛೆಗೆ ವಿರುದ್ಧವಾಗಿ ಕೆಲವೊಂದು ಘಟನೆಗಳು ನಡೆದೀತು. ತಾಳ್ಮೆ, ಸಂಯಮ ಅಗತ್ಯ.

ಕನ್ಯಾ: ಪ್ರೀತಿ ಪಾತ್ರರನ್ನು ಬಹಳ ದಿನಗಳ ನಂತರ ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಅನಗತ್ಯ ಯೋಚನೆಗಳನ್ನು ತೆಗೆದುಹಾಕಿ ಕಾರ್ಯಪ್ರವೃತ್ತರಾಗಿ. ಸಂಗಾತಿಯ ಕೆಲವೊಂದು ಸಲಹೆಗಳು ಉಪಯೋಗಕ್ಕೆ ಬರಲಿದೆ.

ತುಲಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲು ಶನೀಶ್ವರನ ಪ್ರಾರ್ಥನೆ ಮಾಡಬೇಕಾಗುತ್ತದೆ. ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ವೃಶ್ಚಿಕ: ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದೀರಿ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ದೈವಾನುಕೂಲದಿಂದ ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ನಿಮಗೆ ಇಷ್ಟವಿಲ್ಲದಿದ್ದರೂ ಕೆಲವೊಂದು ಕೆಲಸಗಳನ್ನು ಕುಟುಂಬದ ಒಳಿತಿಗಾಗಿ ಮಾಡಬೇಕಾಗುತ್ತದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಅಲಕ್ಷ್ಯ ಬೇಡ. ಸಂಗಾತಿಯ ಮನಸ್ಸಿಗೆ ಬೇಸರವುಂಟು ಮಾಡದಿರಿ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಬಹಳ ದಿನಗಳಿಂದ ಭೇಟಿಯಾಗಬೇಕೆಂದುಕೊಂಡಿದ್ದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ನಿಮ್ಮ ವಿಚಾರಧಾರೆಗಳಿಗೆ ವೃತ್ತಿರಂಗದಲ್ಲಿ ಮನ್ನಣೆ ಸಿಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಸಣ್ಣ ಪುಟ್ಟ ವಿಚಾರಗಳಿಂದ ಸಂತೋಷ ಪಡೆದುಕೊಳ್ಳುವುದನ್ನು ಕಲಿಯಬೇಕು. ಹಣಕಾಸಿನ ಹರಿವು ಕಡಿಮೆಯಾಗಿದ್ದರೂ ಸಕಾಲದಲ್ಲಿ ಆಪ್ತರಿಂದ ನೆರವು ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಮೀನ: ಪ್ರೇಮಿಗಳ ಸಂಬಂಧಕ್ಕೆ ಮನೆಯವರ ಸಹಮತ ಸಿಗಲಿದೆ. ಶೀಘ್ರದಲ್ಲೇ ಶುಭ ಮಂಗಲ ಕಾರ್ಯ ನೆರವೇರಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿಸುವ ಯೋಗ ಕೂಡಿಬರಲಿದೆ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕೆ ಚಂದ್ರಶೇಖರಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments