Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 13 ಜುಲೈ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯಕ್ಷೇತ್ರದಲ್ಲಿ ಸದವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ನಿಮ್ಮ ಜೊತೆಗಿದ್ದವರಿಂದಲೇ ನಿಮಗೆ ವಂಚನೆಯಾಗುವ ಸಂಭವವಿದೆ. ಎಚ್ಚರಿಕೆಯಿಂದಿರಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರಲಿದೆ.

ವೃಷಭ: ಕಾರ್ಯಾರಂಭದಲ್ಲಿ ಇರುವ ಉತ್ಸಾಹ ಕ್ರಮೇಣ ಕಡಿಮೆಯಾದೀತು. ನಿರುದ್ಯೋಗಿಗಳು ಸ್ವ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದಾಯಾದಿ ಕಲಹಗಳಿಗೆ ಹಿರಿಯರಿಂದ ಪರಿಹಾರ ಸಿಗಲಿದೆ. ತಾಳ್ಮೆ, ಸಂಯಮ ಅಗತ್ಯ.

ಮಿಥುನ: ನೀವು ಬಹುವಾಗಿ ಪ್ರೀತಿಸುತ್ತಿರುವ ವ್ಯಕ್ತಿಯಿಂದ ದೂರವಾಗುವ ಅನಿವಾರ್ಯತೆ ಎದುರಾದೀತು. ಕೌಟಂಬಿಕವಾಗಿ ನಿರ್ಧಾರ ಕೈಗೊಳ್ಳುವಾಗ ಸಂಗಾತಿಯೊಂದಿಗೆ ಚರ್ಚಿಸುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.

ಕರ್ಕಟಕ: ಬೇರೆಯವರಿಗಾಗಿ ನಿಮ್ಮ ಸಿದ್ಧಾಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಸಿಂಹ: ವೈಯಕ್ತಿಕವಾಗಿ ನಿಮ್ಮ ಏಳಿಗೆ ಸಂತೋಷಕ್ಕೆ ಕಾರಣವಾಗಲಿದೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಸಿಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸುವಿರಿ.

ಕನ್ಯಾ: ಪ್ರೀತಿ ಪಾತ್ರರ ಇಷ್ಟ ಕಷ್ಟಗಳಿಗೆ ಜೊತೆಯಾಗಲಿದ್ದೀರಿ. ಮಕ್ಕಳಿಂದ ಸಂತೋಷದ ಕ್ಷಣ ಕಳೆಯುವ ಯೋಗ. ಹಿರಿಯರ ದೇಹಾರೋಗ್ಯ ನಿಮಿತ್ತ ಆಸ್ಪತ್ರೆಗೆ ಅಲೆದಾಡಬೇಕಾದೀತು. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ತುಲಾ: ನಿಮ್ಮ ಮನಸ್ಸಿಗನುಗುಣವಾಗಿ ನಿರ್ಧಾರಗಳನ್ನು ಕೈಗೊಳ್ಳಲಿದ್ದೀರಿ. ಕಳೆದು ಹೋದ ವಸ್ತು ಮರಳಿ ಕೈ ಸೇರಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ಕೊಡಲಿದ್ದೀರಿ.

ವೃಶ್ಚಿಕ: ನೀವು ಅಂದುಕೊಂಡ ಯೋಜನೆಗಳು ಸುಗಮವಾಗಿ ನೆರವೇರಿದ ಖುಷಿ ನಿಮ್ಮದಾಗಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳು ಕಂಡುಬಂದರೂ ಹಣಕಾಸಿನ ಹರಿವಿಗೆ ತೊಂದರೆಯಿರದು. ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ಮಹಿಳೆಯರಿಗೆ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಕಷ್ಟದ ಸಂದರ್ಭದಲ್ಲಿ ಇತರರ ಸಹಾಯ ಪಡೆಯಲು ಹಿಂಜರಿಯುವಿರಿ. ಸಂಗಾತಿಯ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾದೀತು. ವಾಹನ ಸಂಚಾರ ಮಾಡುವಾಗ ಎಚ್ಚರಿಕೆಯಿಂದಿರುವುದು ಅಗತ್ಯ. ಕೃಷಿಕರಿಗೆ ವ್ಯವಹಾರಕ್ಕೆ ಅಡೆತಡೆಗಳುಂಟಾಗಲಿದೆ.

ಕುಂಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಆದರೆ ಕೌಟುಂಬಿಕ ವಿಚಾರದಲ್ಲಿ ಸಂಗಾತಿಯ ಅಸಮಾಧಾನ ಎದುರಿಸಬೇಕಾಗಬಹುದು. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಉಂಟಾದೀತು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಪ್ತರ ನೆರವು ಪಡೆಯುವಿರಿ. ಶುಭ ಮಂಗಲ ಕಾರ್ಯ ನೆರವೇರಿಸಲು ಕೆಲವು ದಿನ ಕಾಯುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments