ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 15 ಜುಲೈ 2021 (08:33 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪ್ರೀತಿ ಪಾತ್ರರ ಆಶೋತ್ತರಗಳನ್ನು ಪೂರೈಸಬೇಕಾಗುತ್ತದೆ. ಇಲ್ಲ ಸಲ್ಲದ ವಿಚಾರಕ್ಕೆ ವಿವಾದ ಮೈಮೇಲೆಳದುಕೊಳ್ಳಬೇಡಿ. ಸರ್ಕಾರಿ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ. ತಾಳ್ಮೆ ಅಗತ್ಯ.

ವೃಷಭ: ಬಾಡಿಗೆದಾರರಿಗೆ ಮನೆ ಮಾಲಿಕರಿಂದ ಕಿರಿ ಕಿರಿ ಎದುರಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಸರಕಾರಿ ಕೆಲಸದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕರ್ಕಟಕ: ವೈಚಾರಿಕವಾಗಿ ನಿಮ್ಮ ಆತ್ಮೀಯರೊಂದಿಗೆ ಭಿನ್ನಾಭಿಪ್ರಾಯಗಳು ಕಂಡುಬಂದೀತು. ಸಂಗಾತಿಯ ಸೂಕ್ತ ಸಲಹೆಗಳನ್ನು ಪಾಲಿಸುವುದು ಉತ್ತಮ. ಕೃಷಿಕರಿಗೆ ವ್ಯವಹಾರಗಳು ಸರಾಗವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮದಲ್ಲದ ತಪ್ಪಿಗೆ ತಲೆದಂಡವಾದೀತು. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಕನ್ಯಾ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಸೂಕ್ತವಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯ ತಪ್ಪಲಿದೆ. ತಾಳ್ಮೆ, ಸಂಯಮ ಅಗತ್ಯ.

ತುಲಾ: ಎಷ್ಟೋ ದಿನಗಳಿಂದ ಮಾಡಬೇಕೆಂದಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.

ವೃಶ್ಚಿಕ: ನಿಮಗಾಗಿ ಬಂದ ಅವಕಾಶಗಳನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಳ್ಳಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಯಾರಿಗೂ ಸಾಲ ಕೊಡುವ ಸಾಹಸ ಮಾಡಬೇಡಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಧನು: ಇಷ್ಟು ದಿನ ನಿಮ್ಮನ್ನು ಕಾಡುತ್ತಿದ್ದ ಮನೋವೇದನೆ ದೂರವಾಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮಕರ: ನಿರ್ಧಾರಗಳು ಕೈಗೊಳ್ಳುವಾಗ ಗೊಂದಲಗಳಾದೀತು. ಮನಸ್ಸಿನ ಭಾವನೆಗಳಿಗೆ ಬೆಲೆಕೊಡಿ. ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಕುಂಭ: ವ್ಯಾಪಾರ, ವಹಿವಾಟಿನಲ್ಲಿ ನಿವ್ವಳ ಲಾಭ ಕಂಡುಬರುವುದು. ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲು ಇದು ಸಕಾಲ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಮೀನ: ಹಿರಿಯರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಬಂದೀತು. ಯಾವುದನ್ನೂ ಹಗುರವಾಗಿ ಪರಿಗಣಸದಿರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕಿರು ಸಂಚಾರ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments