Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 20 ಜುಲೈ 2021 (08:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಯಾರದ್ದೋ ತಪ್ಪಿಗೆ ನೀವು ದಂಡ ತೆರುವ ಅನಿವಾರ್ಯತೆ ಎದುರಾದೀತು. ಎಚ್ಚರಿಕೆಯಿಂದ ವ್ಯವಹರಿಸಿದರೆ ಉತ್ತಮ. ಸರ್ಕಾರಿ ಕೆಲಸಗಳಿಗಾಗಿ ಓಡಾಟ ನಡಸಲಿದ್ದೀರಿ. ವ್ಯಾಪಾರಿಗಳಿಗೆ ಚೇತರಿಕೆಯ ವಾತಾವರಣ ಕಂಡುಬರಲಿದೆ.

ವೃಷಭ: ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ ಭವಿಷ್ಯದ ದೃಷ್ಟಿಯಿಂದ ಯೋಜನೆ ಹಾಕಿಕೊಳ್ಳಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬಂದೀತು. ತಾಳ್ಮೆಯಿರಲಿ.

ಮಿಥುನ: ದುಡುಕಿನಿಂದ ನಿರ್ಧಾರ ಕೈಗೊಂಡು ತೊಂದರೆಗೆ ಸಿಲುಕಿಕೊಳ್ಳುವ ಪ್ರಸಂಗ ಎದುರಾದೀತು. ಕೈಲಾಗದ ಕೆಲಸ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಸ್ವಯಂ ವೃತ್ತಿಯವರಿಗೆ ಲಾಭದಾಯಕ ದಿನಗಳಿವು.

ಕರ್ಕಟಕ: ನಿಮ್ಮ ವಿಚಾರಧಾರೆಗಳು ಇತರರಿಗೆ ಇಷ್ಟವಾಗದೇ ಹೋದೀತು. ಯಾರ ಮೇಲೆ ಅತಿಯಾದ ನಿರೀಕ್ಷೆಯಿಟ್ಟುಕೊಂಡಿದ್ದೀರೋ ಅವರಿಂದ ನಿರಾಸೆಯಾದೀತು. ಆಕಸ್ಮಿಕವಾಗಿ ಧನಲಾಭವಾಗಲಿದೆ.

ಸಿಂಹ: ವ್ಯಾಪಾರ, ವ್ಯವಹಾರ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗ ಕೂಡಿಬರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಯೋಗ್ಯ ವಯಸ್ಕರು ಸೂಕ್ತ ವೈವಾಹಿಕ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳಿತು.

ಕನ್ಯಾ: ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯಿಂದ ವರ್ತಿಸಿ. ವಿನಾಕಾರಣ ಅಪವಾದಕ್ಕೆ ಗುರಿಯಾಗುವ ಅಪಾಯವಿದೆ. ನೆರೆಹೊರೆಯವರು ನಿಮ್ಮ ಗುಟ್ಟು ತಿಳಿಯಲು ಪ್ರಯತ್ನಿಸುತ್ತಾರೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ತುಲಾ: ನಿಮ್ಮ ಸ್ವಾಭಾವಿಕ ನಡೆನುಡಿಗಳಿಗೆ ತದ್ವಿರುದ್ಧವಾಗಿ ನಡೆದುಕೊಳ್ಳುವ ಅನಿವಾರ್ಯ ಪರಿಸ್ಥಿತಿ ಎದುರಾಗಲಿದೆ. ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ.

ವೃಶ್ಚಿಕ: ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಅನ್ಯರ ಜೀವನದಲ್ಲಿ ಅನಗತ್ಯವಾಗಿ ಮೂಗು ತೂರಿಸದೇ ಇದ್ದರೆ ಉತ್ತಮ. ಧನಾದಾಯ ಹೆಚ್ಚಿಸಲು ಅನ್ಯ ಮಾರ್ಗಗಳತ್ತ ಚಿಂತನೆ ನಡೆಸಲಿದ್ದೀರಿ.

ಧನು: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ಧೀರಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಓಡಾಟ ನಡೆಸಬೇಕಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮಾನಸಿಕವಾಗಿ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳಿಗೆ ಆಪ್ತರಿಂದ ಸಲಹೆ ಪಡೆಯಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳನ್ನು ಪ್ರಾರಂಭಿಸಲು ಇದು ಸಕಾಲ.

ಕುಂಭ: ಹಿರಿಯರಿಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಆದರೆ ವಿನಾಕಾರಣ ಚಿಂತೆ ಬೇಡ. ಅನಿರೀಕ್ಷಿತವಾಗಿ ಸಿಗುವ ವ್ಯಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ನಿಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಬಹುದಿನಗಳ ಕನಸು ನನಸು ಮಾಡಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments