Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 21 ಜುಲೈ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಕೆಲವೊಂದು ನಿರ್ಧಾರಗಳು ಇತರರಿಗೆ ಕಿರಿ ಕಿರಿಯೆನಿಸಲಿದೆ. ಯಾವುದೇ ವಿಚಾರಗಳನ್ನೂ ಸಂಗಾತಿಯೊಂದಿಗೆ ಹಂಚಿಕೊಳ್ಳುವುದು ಸೂಕ್ತ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ವೈಮನಸ್ಯವೇರ್ಪಡಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ವಿದ್ಯಾರ್ಥಿಗಳಿಗೆ ಕಠಿಣ ಸವಾಲುಗಳು ಎದುರಾಗಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಎದುರಾಳಿಗಳ ಮುಂದೆ ಗೆದ್ದು ಬೀಗುವ ಕ್ಷಣಗಳು ಎದುರಾಗಲಿದೆ. ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಸ್ವಯಂ ಉದ್ಯೋಗಿಗಳಿಗೆ ಮುನ್ನಡೆಯ ಯೋಗವಿದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗವಿದೆ.

ಸಿಂಹ: ನಿಮಗೆ ಇಷ್ಟವಿಲ್ಲದಿದ್ದರೂ ಕೆಲವೊಂದು ಕೆಲಸಗಳನ್ನು ಅನಿವಾರ್ಯವಾಗಿ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕನ್ಯಾ: ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಕಷ್ಟದಲ್ಲಿರುವಾಗ ಸ್ನೇಹಿತರಿಂದ ಸಹಾಯ ಒದಗಿಬರಲಿದೆ. ನಿಮ್ಮ ವಿಚಾರಧಾರೆಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ತುಲಾ: ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಯೋಗ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ಪರವೂರಿಗೆ ಪ್ರಯಾಣ ಬೆಳೆಸಬೇಕಾದೀತು. ಕೃಷಿಕರಿಗೆ ವ್ಯವಹಾರಕ್ಕೆ ತೊಡಕುಂಟಾದೀತು. ತಾಳ್ಮೆಯಿಂದಿರಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ.

ಧನು: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ, ನಷ್ಟವಾಗದು. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಾಧಿಕಾರದ ಯೋಗ ಕೂಡಿಬರಲಿದೆ. ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಸಂದರ್ಭ ಬಂದೀತು. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ.

ಕುಂಭ: ವೃತ್ತಿರಂಗದಲ್ಲಿ ಶತ್ರುಭಯ ತೋರಿಬರಲಿದೆ. ತಾಳ್ಮೆ, ಸಂಯಮದಿಂದ ಯೋಚಿಸಿದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಮೀನ: ಇತರರ ಕಷ್ಟಕ್ಕೆ ನೆರವಾಗುವ ನಿಮ್ಮ ಗುಣವೇ ಕೆಲವೊಮ್ಮೆ ಶತ್ರುವಾದೀತು. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments