ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 24 ಜುಲೈ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅತಿಯಾಗಿ ಇನ್ನೊಬ್ಬರ ಬಗ್ಗೆ ಯೋಚಿಸುವುದು, ನಡೆದು ಹೋದ ಘಟನೆಗಳ ಬಗ್ಗೆ ಯೋಚಿಸುವುದರಿಂದ ಮನಸ್ಸು ಮತ್ತಷ್ಟು ಗೊಂದಲಕ್ಕೀಡಾದೀತು. ಆರ್ಥಿಕವಾಗಿ ಬರಬೇಕಾದ ಬಾಕಿ ಹಣ ವಸೂಲಾತಿ ಬಗ್ಗೆ ಚಿಂತಿಸಲಿದ್ದೀರಿ. ತಾಳ್ಮೆಯಿರಲಿ

ವೃಷಭ: ವ್ಯಾಪಾರ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಲ್ಲಿ ಬೇರೆಯವರು ಮೂಗು ತೂರಿಸುವುದರಿಂದ ಕಿರಿ ಕಿರಿಯಾದೀತು. ನಿಮ್ಮ ವಸ್ತುವಿನ ಬಗ್ಗೆ ಎಚ್ಚರಿಕೆ ವಹಿಸಿ. ಮಹಿಳೆಯರಿಗೆ ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ.

ಮಿಥುನ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕ್ರಿಯಾತ್ಮಕವಾಗಿ ಯೋಚಿಸುವುದರಿಂದ ಮನಸ್ಸಿಗೆ ಹೊಸ ಉಲ್ಲಾಸ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಹಿರಿಯರೊಂದಿಗೆ ಅನಗತ್ಯ ಸಂಘರ್ಷ ತಪ್ಪಿಸಿದರೆ ಉತ್ತಮ. ಸಹೋದರರ ಮಾತುಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತಿಯ ಯೋಗವಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ವಿಚಿತ್ರ ಅನುಭವಗಳು ಇಂದು ನಿಮಗೆ ಎದುರಾಗಲಿದೆ. ಅಪರಿಚಿತರಿಂದಲೂ ನಿಮ್ಮ ಕಾರ್ಯ ಸಾಧನೆಗೆ ಸಹಾಯವಾದೀತು. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಪಡೆಯಲು ನಿಮ್ಮ ಪ್ರಯತ್ನ ಮುಂದುವರಿಸಬೇಕಾಗುತ್ತದೆ.

ಕನ್ಯಾ: ಮನಸ್ಸಿನಲ್ಲಿ ಮೂಡುವ ವಿವಿಧ ಆಲೋಚನೆಗಳಿಗೆ ಆಪ್ತರಿಂದ ಪರಿಹಾರ ಕಂಡುಕೊಳ್ಳಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ, ಗೌರವ ಹೆಚ್ಚುವುದು.

ತುಲಾ: ಕಷ್ಟದ ಸಮಯದಲ್ಲಿ ಹಿಂದೆ ನಿಮಗೆ ಸಹಾಯ ಮಾಡಿದವರಿಗೆ ಪ್ರತ್ಯುಪಕಾರ ಮಾಡುವ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಂತೋಷದ ವಾತಾವರಣವಿರಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ.

ವೃಶ್ಚಿಕ: ದಾಯಾದಿ ಕಲಹಗಳಿಗೆ ರಾಜೀ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಂಯ ಉದ್ಯೋಗದ ದಾರಿ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸುವಿರಿ. ದಿನದಂತ್ಯಕ್ಕೆ ನೆಮ್ಮದಿ.

ಧನು: ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ ಭವಿಷ್ಯದ ದೃಷ್ಟಿಯಿಂದ ಯೋಜನೆ ರೂಪಿಸಬೇಕಾಗುತ್ತದೆ. ಮಕ್ಕಳ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಮಂಗಳ ವಸ್ತ್ರ ಖರೀದಿ ದಿನ ಮುಂದೂಡಿಕೆಯಾಗಲಿದೆ.

ಮಕರ: ವ್ಯಾವಹಾರಿಕವಾಗಿ ಎಷ್ಟೇ ಅಡೆತಡೆಗಳಿದ್ದರೂ ನಿಮ್ಮ ಸ್ವ ಪ್ರಯತ್ನದಿಂದ ಕಾರ್ಯಸಾಧನೆಯಾಗಲಿದೆ. ಹಳೆಯ ಮಿತ್ರರ ಭೇಟಿ ಮನಸ್ಸಿಗೆ ಖುಷಿ ಕೊಡಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಡಿಮೆಯಾಗುವುದು.

ಕುಂಭ: ಕಾರ್ಯರಂಗದಲ್ಲಿ ಹೊಸ ಅವಕಾಶಗಳ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆಯುಂಟಾದೀತು. ಹಣ ಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ತಾಳ್ಮೆ, ಸಂಯಮವಿರಲಿ.

ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಯಾವುದೇ ನಿರ್ಧಾರ ಕೈಗೊಳ‍್ಳುವ ಮುನ್ನ ಸರಿಯಾಗಿ ಯೋಚಿಸಿ ಮುನ್ನಡೆಯಿರಿ. ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಕಾರ್ಯಗತಗೊಳಿಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments