ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 25 ಜುಲೈ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಿಂದೆ ಆದ ಬೇಸರದ ವಿಚಾರಗಳನ್ನು ಮರೆತು ಮುನ್ನಡೆಯಬೇಕಾದ ಅನಿವಾರ್ಯತೆ ಎದುರಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು.

ವೃಷಭ: ಯಾವುದೇ ವಿಚಾರವಾದರೂ ಹಿಂದೆ ಮುಂದೆ ಯೋಚಿಸದೇ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆ ಎದುರಿಸಬೇಕಾದೀತು. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಿಥುನ: ಆರ್ಥಿಕವಾಗಿ ಕೈಗೊಳ್ಳಬೇಕಾಗಿದ್ದ ಯೋಜನೆಗಳು ಅರ್ಧಕ್ಕೇ ಸ್ಥಗಿತವಾಗಲಿದೆ. ಹೊಸ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವಾದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.

ಕರ್ಕಟಕ: ಮನೆಯಲ್ಲಿ ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಸಂತೋಷವಿರಲಿದೆ. ಆದರೆ ಆಕಸ್ಮಿಕ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಪ್ರೇಮಿಗಳಿಗೆ ಇಷ್ಟಪಟ್ಟವರ ಜೊತೆ ಮನದಾಳ ಹಂಚಿಕೊಳ್ಳುವ ಅವಕಾಶ ಸಿಗಲಿದೆ.

ಸಿಂಹ: ಇಂದು ವಿಶೇಷ ವ್ಯಕ್ತಿಯ ಭೇಟಿಯಿಂದ ನಿಮ್ಮ ಕಾರ್ಯ ಸಾಧನೆಗೆ ಅನುಕೂಲವಾಗಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ದಾರಿ ಕಂಡುಕೊಳ್ಳಲಿದ್ದಾರೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಚಿಂತೆ ಬೇಡ.

ಕನ್ಯಾ: ಸಕಾರಾತ್ಮಕ ಮನೋಭಾವದಿಂದ ನೀವು ಕೈ ಹಿಡಿಯುವ ಯಾವುದೇ ಕೆಲಸಗಳೂ ಇಂದು ಯಶಸ್ವಿಯಾಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ.

ತುಲಾ: ನಿಮ್ಮ ಮನಸ್ಸಿನಲ್ಲಿ ಓಡುವ ಯೋಚನೆಗಳಿಂದ ಜೊತೆಗಿದ್ದವರ ಮೇಲೆ ಅಸಮಾಧಾನ ತೋರಲು ಹೋಗಬೇಡಿ. ಕೌಟುಂಬಿಕ ಸಂಬಂಧಗಳು ಕಾಪಾಡುವ ಹೊಣೆ ನಿಮ್ಮ ಮೇಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಕಾರ್ಯರಂಗದಲ್ಲಿ ನಿಮ್ಮ ಉನ್ನತಿಗೆ ಮಹತ್ವದ ಹೆಜ್ಜೆಯಿಡಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆಬರಲಿದೆ. ತಾಳ್ಮೆಯಿಂದ ಯೋಚಿಸಿದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಧನು: ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರಲು ಹೋಗಬೇಡಿ. ಮಕ್ಕಳ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆ ಕೊಡಿ. ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ ಸಿಗಲಿದೆ.

ಮಕರ: ನೆರೆಹೊರೆಯವರು ನಿಮ್ಮ ಮನೆ ವಿಚಾರದಲ್ಲಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ವಾಹನಾದಿ ಸೌಕರ್ಯ ಖರೀದಿಸಲು ಕೆಲವು ಸಮಯ ಕಾಯುವುದು ಉತ್ತಮ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ.

ಕುಂಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ. ವ್ಯಾಪಾರಿಗಳಿಗೆ ಚೇತರಿಕೆಯ ವಾತಾವರಣ ಕಂಡುಬರುವುದು.

ಮೀನ: ಅಂದುಕೊಂಡಿದ್ದ ಕೆಲಸಗಳು ನಡೆಯುತ್ತಿಲ್ಲ ಎಂಬ ಅಸಮಾಧಾನ ನಿಮ್ಮನ್ನು ಕಾಡಲಿದೆ. ಹಳೆಯ ಬಾಕಿ ವಸೂಲಾತಿ ಚಿಂತೆ ಕಾಡುವುದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಲಿದ್ದೀರಿ. ಮನೆಗೆ ಬಂಧುಮಿತ್ರರ ಆಗಮನವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments