Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 27 ಜುಲೈ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸಿನಲ್ಲಿ ಇರುವುದೆಲ್ಲವೂ ಈಚೆ ಹಾಕಬೇಕೆನ್ನುವ ಬಯಕೆಯಾದೀತು. ನಿಮ್ಮ ಮಾತುಗಳಿಂದ ಬೇರೆಯವರಿಗೆ ನೋವಾಗದಂತೆ ಎಚ್ಚರಿಕೆ ವಹಿಸಿ. ಆರ್ಥಿಕ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ವ್ಯಾಮೋಹ ಬೇಡ. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮಿಥುನ: ನಿಮ್ಮ ಮನೋಕಾಮನೆಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆಯಿರಲಿದೆ.

ಕರ್ಕಟಕ: ನಿಮ್ಮ ಕಷ್ಟಕ್ಕೆ ಹಿಂದೆ ಸ್ಪಂದಿಸಿದವರಿಗೆ ಋಣ ಸಂದಾಯ ಮಾಡುವ ಯೋಗ ನಿಮ್ಮದಾಗುವುದು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ವಾಹನ ಸಂಚಾರದಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನಿಮ್ಮ ಮನಸ್ಸು ಹೇಳಿದಂತೆ ನಿರ್ಧಾರ ಕೈಗೊಳ್ಳಲಿದ್ದೀರಿ. ಬೇರೆಯವರ ಕಷ್ಟಗಳಿಗೆ ಸ್ಪಂದಿಸುವ ನಿಮ್ಮ ಗುಣ ನಿಮಗೆ ಮುಂದೊಂದು ದಿನ ಒಳಿತು ಮಾಡಲಿದೆ. ಹಿರಿಯರ ಸಲಹೆಗಳು ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರಲಿದೆ.

ಕನ್ಯಾ: ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ ಸರಿಯಾದ ರೀತಿಯಲ್ಲಿ ಭವಿಷ್ಯಕ್ಕೆ ಯೋಜನೆ ರೂಪಿಸಬೇಕಾಗುತ್ತದೆ. ಇಷ್ಟಮಿತ್ರರ ಭೇಟಿಯಾಗುವ ಯೋಗ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ತುಲಾ: ನೀವು ಎಷ್ಟೇ ದುಡಿದರೂ ಅದರ ಫಲ ಕೈಗೆಟುಕುತ್ತಿಲ್ಲ ಎಂಬ ನಿರಾಸೆ ಕಾಡೀತು. ಹಿಂದಿನ ಬಾಕಿ ಹರಕೆಗಳನ್ನು ಪೂರ್ತಿ ಮಾಡಲು ಮುಂದಾಗುವಿರಿ. ಯೋಗ್ಯ ವಯಸ್ಕರು ಸೂಕ್ತ ವೈವಾಹಿಕ ಸಂಬಂಧಕ್ಕೆ ಕಾಯುವುದು ಉತ್ತಮ.

ವೃಶ್ಚಿಕ: ನಿಮ್ಮ ದೈನಂದಿನ ವ್ಯವಹಾರಕ್ಕೆ ಅನಿರೀಕ್ಷಿತವಾಗಿ ಅಡ್ಡಿ ಎದುರಾಗಲಿದೆ. ಕಾರ್ಯಾರಂಭದಲ್ಲೇ ವಿಘ್ನಭೀತಿ ಎದುರಾದರೂ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಭ‍್ಯಾಸ ಮಾಡುವುದು ಮುಖ್ಯ.

ಧನು: ಮನೆಗೆ ಸಂಬಂಧಿಸಿದಂತೆ ಹೊಸ ನಿರ್ಧಾರಗಳನ್ನು ಕೈಗೊಳ್ಳಲಿದ್ದೀರಿ, ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ಮಕ್ಕಳ ಅಭಿಪ್ರಾಯಗಳಿಗೂ ಬೆಲೆ ಕೊಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಕರ: ನಿಮ್ಮ ವಿಚಾರಗಳನ್ನು ಇತರರ ಮೇಲೆ ಹೇರಲು ಹೋಗಬೇಡಿ. ಹಿರಿಯರೊಂದಿಗೆ ಸಂಘರ್ಷಕ್ಕಿಳಿಯದಿದ್ದರೆ ಉತ್ತಮ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಗೇರುವ ಅವಕಾಶ ಸಿಗಲಿದೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ಕುಂಭ: ಪಾಲಿಗೆ ಬಂದಿದ್ದು ಪಂಚಾಮೃತ ಎಂದು ನಡೆದುಕೊಳ್ಳಬೇಕಾಗುತ್ತದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಒಳಿತು. ವ್ಯಾಪಾರಿಗಳಿಗೆ ಲಾಭವೂ ಅಲ್ಲದ, ನಷ್ಟವೂ ಅಲ್ಲದ ದಿನವಾಗಲಿದೆ.

ಮೀನ: ನಿಮ್ಮ ಆದಾಯದ ಮೂಲಕ್ಕೆ ಪೆಟ್ಟು ಬೀಳಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಮುಂದಾಗಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments