Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 30 ಜುಲೈ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಕೈಲಾಗದ ಕೆಲಸ ಮಾಡುವ ಅನಗತ್ಯ ದುಸ್ಸಾಹಸಕ್ಕೆ ಕೈಹಾಕಬೇಡಿ. ಭವಿಷ್ಯದ ದೃಷ್ಟಿಯಿಂದ ಆರ್ಥಿಕ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗವಿದೆ. ತಾಳ್ಮೆಯಿರಲಿ.

ವೃಷಭ: ನಿಮ್ಮ ಮುಂಗೋಪವೇ ನಿಮಗೆ ಶತ್ರುವಾಗಲಿದೆ. ಆತುರದ ಕೈಗೆ ಬುದ್ಧಿ ಕೊಟ್ಟು ನಿರ್ಧಾರ ತೆಗೆದುಕೊಳ್ಳಲು ಹೋದರೆ ಸಂಬಂಧಗಳು ಹಾಳಾದೀತು, ಎಚ್ಚರಿಕೆಯಿರಲಿ. ಮನೆಗೆ ಅತಿಥಿಗಳ ಆಗಮನವಾದೀತು.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ಮಾಡಲಿದ್ದು, ಮಂಗಳ ವಸ್ತ್ರ ಖರೀದಿ ಮಾಡಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ದವಾಗಿರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಸಂಯಮ ಅಗತ್ಯ.

ಕರ್ಕಟಕ: ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಕುಲದೇವರ ಸೇವೆ ಮಾಡಲು ಮುಂದಾಗಲಿದ್ದೀರಿ. ನಿರುದ್ಯೋಗಿಗಳಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ವೈದ್ಯಕೀಯ ವೃತ್ತಿಯವರಿಗೆ ಬಿಡುವಿಲ್ಲದ ಕಾರ್ಯವಿರಲಿದೆ.

ಸಿಂಹ: ಮಹಿಳೆಯರಿಗೆ ಸ್ಥಾನ ಮಾನ ವೃದ್ಧಿಸಿಕೊಳ್ಳಲು ಸೂಕ್ತ ಅವಕಾಶಗಳು ಸಿಗಲಿವೆ. ಎಷ್ಟೋ ದಿನದಿಂದ ಬಯಸಿದ್ದ ವಸ್ತುಗಳು ತಾನಾಗಿಯೇ ಕೈ ಸೇರಲಿದೆ. ಮಾತಿನ ಮೇಲೆ ನಿಗಾ ಇರಲಿ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಇನ್ನೊಬ್ಬರ ಬಗೆಗಿನ ನಿಮ್ಮ ಕಾಳಜಿ ಮನೋಭಾವದಿಂದ ನಿಮಗೆ ಮುಂದೊಂದು ದಿನ ಒಳಿತಾಗಲಿದೆ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಿ ಸಂತೋಷಪಡಿಸಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ತುಲಾ: ದೀರ್ಘ ಕಾಲದ ಸಮಸ್ಯೆಗೆ ಮುಕ್ತಿ ಸಿಗಬೇಕಾದರೆ ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಸಹವರ್ತಿಗಳ ಜೊತೆ ಸಂಯಮದಿಂದ ವರ್ತಿಸಿ. ಹಿರಿಯರಿಗೆ ತೀರ್ಥ ಯಾತ್ರೆ ಕೈಗೊಳ್ಳುವ ಕನಸು ಸದ್ಯದಲ್ಲೇ ನನಸಾಗಲಿದೆ.

ವೃಶ್ಚಿಕ: ಮಾನಸಿಕವಾಗಿ ಇಲ್ಲಸಲ್ಲದ ಯೋಚನೆ ಮಾಡುವುದನ್ನು ಬಿಟ್ಟು ಕಾರ್ಯಪ್ರವೃತ್ತರಾಗಿ. ಬೇರೆಯವರ ಜೀವನದಲ್ಲಿ ಏನು ನಡೆಯುತ್ತಿದೆ ಎಂಬ ಕೆಟ್ಟ ಕುತೂಹಲ ಬೇಡ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ.

ಧನು: ನಿಮ್ಮ ಬಹುದಿನಗಳ ಕನಸು ಇಂದು ತಾನಾಗಿಯೇ ನೆರವೇರಲಿದೆ. ಅನಗತ್ಯ ಮಾನಸಿಕ ಗೊಂದಲಗಳಿಗೆ ಎಡೆ ಮಾಡಕೊಡದಿರಿ. ಸಂಗಾತಿಗೆ ಸಾಂತ್ವನದ ಮಾತು ಹೇಳಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿದರೆ ಉತ್ತಮ.

ಮಕರ: ವಿದ್ಯಾರ್ಥಿಗಳು ಭವಿಷ್ಯದ ದೃಷ್ಟಿಯಿಂದ ಅಭ್ಯಾಸಕ್ಕೆ ಪೂರಕವಾದ ಕೆಲಸ ಮಾಡಬೇಕಾಗುತ್ತದೆ. ಹಿರಿಯರ ಹಿತವಚನಗಳು ಬೇಸರವೆನಿಸೀತು. ತಾಳ್ಮೆ, ಸಂಯಮ ಅಗತ್ಯ. ದೇಹಾರೋಗ್ಯದಲ್ಲಿ ಸುಧಾರಣೆಯಿರಲಿದೆ.

ಕುಂಭ: ವ್ಯಾಪಾರಿ  ವರ್ಗದವರಿಗೆ ಅನುಕೂಲಕರ ವಾತಾವರಣವಿರಲಿದೆ. ಮನಸ್ಸಿನಲ್ಲಿ ಕಾಡುತ್ತಿದ್ದ ಗೊಂದಲಗಳಿಗೆ ಆಪ್ತರಿಂದ ಪರಿಹಾರ ಸಿಗಲಿದೆ. ಧಾರ್ಮಿಕ ಕಾರ್ಯಗಳಿಗೆ ಹಣಕಾಸಿನ ಖರ್ಚು ವೆಚ್ಚವಾದೀತು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಜೀವನದಲ್ಲಿ ಇಂದು ಕೆಲವು ಅನಿರೀಕ್ಷಿತ ಘಟನೆಗಳಿಗೆ ಸಾಕ್ಷಿಯಾಗಲಿದ್ದೀರಿ. ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗವಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಮರು ಚಾಲನೆ ನೀಡಲಿದ್ದೀರಿ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments