ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 1 ಆಗಸ್ಟ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಮನದಿಂಗಿತ ಪೂರೈಸಲು ಯಾವುದೇ ಹಂತಕ್ಕೆ ಹೋಗಲೂ ಸಿದ್ಧರಿರುತ್ತೀರಿ. ಸಾಂಸಾರಿಕವಾಗಿ ಪತ್ನಿಯೊಂದಿಗೆ ಮಾತಿಗಿಂತ ಮೌನವೇ ಲೇಸು. ಮನೆಗೆ ಅತಿಥಿಗಳ ಆಗಮನದ ಸಾಧ‍್ಯತೆಯಿದೆ.

ವೃಷಭ: ನಿಮ್ಮ ಕಳೆದು ಹೋದ ವಸ್ತುಗಳು ತಾನಾಗಿಯೇ ಮರಳಿ ಕೈಸೇರುವ ಯೋಗವಿದೆ. ಇಷ್ಟಮಿತ್ರರೊಂದಿಗೆ ಭೋಜನ, ಕಿರು ಪ್ರವಾಸ ಇತ್ಯಾದಿ ಸಂಭವವಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು.

ಮಿಥುನ: ನಿಮ್ಮ ಪರೋಪಕಾರಿ ಗುಣ ಮಿತ್ರ ವರ್ಗದವರಿಂದ ಪ್ರಶಂಸೆಗೊಳಗಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಧಾರ್ಮಿಕ ಕೆಲಸಗಳನ್ನು ನೆರವೇರಿಸಲು ಧನ ವ್ಯಯವಾದೀತು.

ಕರ್ಕಟಕ: ಹಳೆಯ ಮಿತ್ರರ ಭೇಟಯಿಂದ ಅನಿರೀಕ್ಷಿತವಾಗಿ ಕಾರ್ಯಸಾಧನೆಯಾಗಲಿದೆ. ಸ್ವಯಂ ವೃತ್ತಿಯವರಿಗೆ ಅಪರಿಚಿತರಿಂದ ವಂಚನೆ ಸಂಭವವಿದೆ. ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಎಷ್ಟೇ ಎಚ್ಚರಿಕೆ ವಹಿಸಿದರೂ ಕೆಲವೊಂದು ಅನಾಹುತ ತಪ್ಪಿಸಲಾಗದು. ಆತ್ಮೀಯರ ಕಷ್ಟದಲ್ಲಿ ಸಹಭಾಗಿಯಾಗಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ತಾಳ್ಮೆಯಿರಲಿ.

ಕನ್ಯಾ: ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಹಿಳೆಯರಿಗೆ ವಸ್ತ್ರಾಭರಣ ಖರೀದಿ ಮಾಡುವ ಯೋಗ ಕೂಡಿಬರುವುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಚಿಂತೆ ಬೇಡ.

ತುಲಾ: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಜಾರಿಗೆ ತರಲು ಮನೆಯವರ ಒಪ್ಪಿಗೆ ಪಡೆಯಲಿದ್ದೀರಿ. ಪ್ರೇಮಿಗಳಿಗೆ ಮನೆಯವರಿಂದ ಒಪ್ಪಿಗೆ ಸಿಗಲಿದೆ. ಯಂತ್ರೋಪಕರಣ ಕೆಲಸ ಮಾಡುವವರಿಗೆ ಬಿಡುವಿನ ದಿನದ ಖುಷಿ ಸಿಗಲಿದೆ.

ವೃಶ್ಚಿಕ: ಅನಗತ್ಯ ಯೋಚನೆಗಳನ್ನು ಬದಿಗಿಟ್ಟು ಕುಟುಂಬದವರೊಂದಿಗೆ ಸಂತೋಷದಿಂದ ಕಾಲ ಕಳೆಯಲಿದ್ದೀರಿ. ಮಕ್ಕಳ ಬಹುದಿನಗಳ ಬೇಡಿಕೆ ಪೂರ್ತಿ ಮಾಡುವಿರಿ. ಅನಿರೀಕ್ಷಿತವಾಗಿ ನೆಂಟರಿಷ್ಟರ ಭೇಟಿ ಸಾಧ‍್ಯತೆ. ಸಂತೋಷವಿರಲಿದೆ.

ಧನು: ನಿಮ್ಮ ಮಾತುಗಳಿಂದ ಇತರರ ಮನಸ್ಸಿಗೆ ನೋವಾದೀತು. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ತೋರದೇ ಹೋದಲ್ಲಿ ಫಲಿತಾಂಶ ಸಿಗದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಕೆಳ ಹಂತದ ನೌಕರರಿಗೆ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಜಮೀನು ಖರೀದಿ, ಮಾರಾಟ ವ್ಯವಹಾರಕ್ಕೆ ಮುಂದಾಗಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಿರು ಸಂಚಾರ ಮಾಡಬೇಕಾಗಬಹುದು.

ಕುಂಭ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡಿದ್ದ ಕೆಲಸಗಳು ಸುಗಮವಾಗಿ ನೆರವೇರಲಿದೆ. ವ್ಯಾಪಾರಿಗಳಿಗೆ ಅಭಿವೃದ್ಧಿದಾಯಕ ವಾತಾವರಣವಿರಲಿದೆ. ವಿಚಾರವಂತರ ಮಾತು, ಸಂಘದಿಂದ ಮನಸ್ಸಿಗೆ ನೆಮ್ಮದಿಯಾಗುವುದು.

ಮೀನ: ಅನಿರೀಕ್ಷಿತವಾಗಿ ಎದುರಾಗುವ ವ್ಯಕ್ತಿಯಿಂದ ನಿಮಗೆ ಲಾಭವಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ದೇಹಾಯಾಸವಾದೀತು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದೇವತಾ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments