Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 2 ಆಗಸ್ಟ್ 2021 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೀವು ಉದ್ದೇಶಿಸಿದ ಕೆಲಸ ಪೂರ್ತಿಯಾಗಬೇಕಾದರೆ ಕೆಲವೊಂದು ಅಡೆತಡೆ ದಾಟಬೇಕಾಗುತ್ತದೆ. ಬೇರೆಯವರ ಕಷ್ಟಕ್ಕೆ ಸಾಥ್ ಕೊಡಲಿದ್ದೀರಿ. ನಿಮ್ಮ ಮನಸ್ಸಿನ ಮಾತುಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳುವಿರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ನಿರುದ್ಯೋಗಿಗಳು ಉದ್ಯೋಗ ಸಂಬಂಧವಾಗಿ ಸಮಸ್ಯೆಗಳಿಗೆ ಶನಿದೇವರ ಪೂಜೆ ಮಾಡುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಬೇರೆಯವರ ಕಷ್ಟದಲ್ಲಿ ಸಮಭಾಗಿಯಾಗಲು ಹೋಗಿ ನೀವೇ ತೊಂದರೆಗೆ ಸಿಲುಕಿಕೊಳ್ಳದಿರಿ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ಕಂಡುಬಂದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ.

ಕರ್ಕಟಕ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ನೂತನ ದಂಪತಿಗಳು ಮೂರನೆಯವರ ಪ್ರವೇಶಕ್ಕೆ ಸಿದ್ಧರಾಗಲಿ. ಹಿರಿಯರ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದೀತು.

ಸಿಂಹ: ಮನಸ್ಸಿನಲ್ಲಿ ಅಂದುಕೊಂಡಿದ್ದೇ ನಡೆದಾಗ ಅಚ್ಚರಿಯಾಗುವುದು. ಇಷ್ಟದೇವರ ಪ್ರಾರ್ಥನೆ ಮಾಡಿದರೆ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಪ್ರೀತಿ ಪಾತ್ರರಿಂದ ಅಚ್ಚರಿಯ ಉಡುಗೊರೆ ಪಡೆಯಲಿದ್ದೀರಿ.

ಕನ್ಯಾ: ಭವಿಷ್ಯದ ಬಗ್ಗೆ ಇಂದೇ ಯೋಜನೆ ರೂಪಿಸಬೇಕಾಗುತ್ತದೆ. ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ತುಲಾ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಭವಿಷ್ಯದಲ್ಲಿ ಒಳ್ಳೆಯ ದಿನಗಳಿಗಾಗಿ ಇಂದೇ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಪಡೆಯಲಿದ್ದೀರಿ.

ವೃಶ್ಚಿಕ: ನಿಮ್ಮ ಬೇಕು-ಬೇಡಗಳ ಬಗ್ಗೆ ಯೋಚನೆ ಮಾಡುವವರ ಮನಸ್ಸಿಗೆ ನೋವುಂಟು ಮಾಡಬೇಡಿ.  ಮಾತಿನ ಮೇಲೆ ನಿಗಾ ಇರಲಿ. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ ಮಾಡಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆಯಿರಲಿದೆ.

ಧನು: ಅಧಿಕ ಧನ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಅನಗತ್ಯವಾಗಿ ವಿವಾದ ಮೈಮೇಲೆಳೆದುಕೊಳ್ಳಬೇಡಿ. ಮಕ್ಕಳೊಂದಿಗೆ ಮನದಾಳ ಹಂಚಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಕರ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ವ್ಯಾಮೋಹ ಒಳ್ಳೆಯದಲ್ಲ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಪಾಲು ಬಂಡವಾಳ ಹೂಡಿಕೆ ವ್ಯವಹಾರ ಲಾಭ ತಂದುಕೊಡಲಿದೆ. ತಾಳ್ಮೆಯಿರಲಿ.

ಕುಂಭ: ಬಯಸಿದ ವ್ಯಕ್ತಿ, ವಸ್ತು ಕೈಗೆಟುಕುವ ದಿನವಿದು. ಸಾಂಸಾರಿಕವಾಗಿ ಸಂತೋಷವಿರಲಿದೆ. ಆದರೆ ಆರ್ಥಿಕವಾಗಿ ಹಣಕಾಸಿನ ಅಡಚಣೆ ಕಂಡುಬಂದೀತು. ಸ್ವಯಂ ವ್ಯಾಪಾರಿಗಳು ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆ ವಹಿಸಬೆಕಾಗುತ್ತದೆ.

ಮೀನ: ವಾಹನ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ನಿಮ್ಮ ಬಗ್ಗೆ ನೀವೇ ಋಣಾತ್ಮಕ ಚಿಂತೆ ಬೆಳೆಸಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷವಿರುವವರು ಇಂದು ಆಂಜನೇಯನ ಈ ಸ್ತೋತ್ರವನ್ನು ಓದಿ

ಮಂಗಳವಾರ ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮುಂದಿನ ಸುದ್ದಿ
Show comments