Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 3 ಆಗಸ್ಟ್ 2021 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಾಸ್ತವಕ್ಕೆ ಅನುಗುಣವಾಗಿ ನಿಮ್ಮನ್ನು ನೀವು ಬದಲಾಯಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ವೃಷಭ: ವೃತ್ತಿರಂಗದಲ್ಲಿ ಅಡೆತಡೆಗಳು ಸಾಮಾನ್ಯ. ಅದನ್ನು ಎದುರಿಸಿಕೊಂಡು ಹೋಗುವ ಗುಣ ಬೆಳೆಸಿಕೊಳ್ಳಬೇಕು. ಹಿರಿಯರಲ್ಲಿ ಅನಗತ್ಯ ಸಂಘರ್ಷಕ್ಕೆ ಎಡೆಮಾಡಿಕೊಡದಿರಿ. ದಾಯಾದಿ ಕಲಹಗಳು ಪರಿಹಾರವಾಗಲಿದೆ.

ಮಿಥುನ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದೇ ನಿರಾಸೆಯಾದೀತು. ಉನ್ನತ ವರ್ಗದ ಉದ್ಯೋಗದಲ್ಲಿರುವವರಿಗೆ ಮುನ್ನಡೆ.

ಕರ್ಕಟಕ: ವ್ಯವಸಾಯ ಮಾಡುವವರಿಗೆ ಕೆಲಸ ಕಾರ್ಯಗಳಿಗೆ ತೊಂದರೆಯಾಗದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ತಮ್ಮ ಸ್ಥಾನ ಮಾನ ವೃದ್ಧಿಸಿಕೊಳ್ಳಲು ಅವಕಾಶ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭರವಸೆ ಸಿಗುವುದು. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿ ಬಾರದು.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ವೃದ್ಧಿಗೆ ಮಾಡಬೇಕಾದ ಕೆಲಸಗಳನ್ನು ಮಾಡಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ತುಲಾ: ನೆರೆಹೊರೆಯವರ ಚಾಡಿ ಮಾತಿನಿಂದ ಮನಸ್ಸಿಗೆ ಬೇಸರವುಂಟಾದೀತು. ಸಂಗಾತಿಯ ಸಾಂತ್ವನ ನೆಮ್ಮದಿ ನೀಡಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಹಿರಿಯರಿಗೆ ತೀರ್ಥ ಯಾತ್ರೆ ಕೈಗೊಳ್ಳುವ ಕನಸು ಸದ್ಯದಲ್ಲೇ ನನಸಾಗುವುದು. ನೂತನ ಕಟ್ಟಡ ಕಾಮಗಾರಿ ಕೆಲಸಗಳನ್ನು ಕೆಲವು ದಿನ ಮುಂದೂಡಬೇಕಾದೀತು. ಹಣ ಗಳಿಕೆಗೆ ನಾನಾ ಮಾರ್ಗಗಳ ಹುಡುಕಾಟ ನಡೆಸುವಿರಿ.

ಧನು: ಹಳೆಯ ಯೋಜನೆಗಳನ್ನು ಮುಂದುವರಿಸಲು ಪ್ರಯತ್ನ ನಡೆಸಲಿದ್ದೀರಿ. ವಾಹನ ರಿಪೇರಿ, ಗೃಹೋಪಯೋಗಿ ವಸ್ತುಗಳ ಖರೀದಿ ಇತ್ಯಾದಿ ನಾನಾ ಖರ್ಚುಗಳು ಕಂಡುಬಂದೀತು. ಆಪ್ತ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ.

ಮಕರ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಸಂಘರ್ಷಗಳಾದೀತು. ಮಾತಿನ ಮೇಲೆ ಹಿಡಿತವಿರಲಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ.

ಕುಂಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮಂಗಳ ವಸ್ತ್ರಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಬೇಡಿ.

ಮೀನ: ಕಷ್ಟದ ಸಮಯದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ದಾರಿಯನ್ನು ನೀವೇ ಕಂಡುಕೊಳ್ಳಬೇಕಿದೆ. ಕೌಟುಂಬಿಕವಾಗಿ ನಿಮ್ಮ ಅಭಿಪ್ರಾಯಗಳಿಗೆ ಇತರರ ಸಹಮತ ಸಿಗಬಹುದು. ತಾಳ್ಮೆ, ಸಂಯಮ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ