Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 5 ಆಗಸ್ಟ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮಗೆ ಆಗದವರು ನಿಮ್ಮ ಬಗ್ಗೆ ಚಾಡಿ ಮಾತು ಹೇಳಲಿದ್ದಾರೆ. ಆದರೆ ಮೌನವೇ ಎಲ್ಲದಕ್ಕೂ ಪರಿಹಾರ ನೀಡಲಿದೆ. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ವೃಷಭ: ನಿಮ್ಮ ಸದಾಶಯಗಳಿಗೆ ಸಂಗಾತಿಯ ಸಾಥ್ ಸಿಗಲಿದೆ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಯೋಜನೆ ರೂಪಿಸುವುದು ಉತ್ತಮ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಹಿರಿಯರು ಹೇಳುವ ಕೆಲವೊಂದು ಮಾತುಗಳು ನಿಮಗೆ ಅಪಥ್ಯವೆನಿಸೀತು. ಸರಿಯಾದ ಸಂದರ್ಭದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡಲ್ಲಿ ಕೆಲಸ ಕಾರ್ಯಗಳಲ್ಲಿ ಜಯ ಸಾಧ್ಯ. ವ್ಯಾಪಾರಿಗಳಿಗೆ ನಷ್ಟದ ಭೀತಿ ಎದುರಾದೀತು.

ಕರ್ಕಟಕ: ಬೇರೆಯವರ ಅಭಿಪ್ರಾಯಗಳಿಗೆ ಬೆಲೆ ಕೊಟ್ಟು ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಗಳು ಕಾಡುವುದು ಸಹಜ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಬಹುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಸಿಂಹ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಜಾರಿಗೆ ತರಲು ಪ್ರಯತ್ನ ನಡೆಸಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನ ವೃದ್ಧಿಯಾಗಲಿದೆ. ಸರಕಾರಿ ನೌಕರರಿಗೆ ಹಿನ್ನಡೆಯಾದೀತು. ದೇವತಾ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಕನ್ಯಾ: ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಭೂಮಿ ಖರೀದಿ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳಿಂದ ಸಂತಸ ಸಿಗಲಿದೆ.

ತುಲಾ: ಹೊಸ ಮಿತ್ರರ ಸಂಘದಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಸ್ವಯಂ ವೃತ್ತಿಯವರಿಗೆ ಲಾಭದ ದಿನವಿಂದು.

ವೃಶ್ಚಿಕ: ಹಳೆಯ ವಾಜ್ಯಗಳಿಗೆ ಮುಕ್ತಿ ಕೊಡಲಿದ್ದೀರಿ. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ವಾಹನ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಡೊಗಬೇಕಾಗಿಲ್ಲ.

ಧನು: ವಿಚಾರವಂತರ ಹಿತವಚನಗಳಿಂದ ನಿಮಗೆ ಒಳಿತಾಗಲಿದೆ. ಉದ್ದೇಶಿತ ಕಾರ್ಯಗಳನ್ನು ಪೂರ್ತಿ ಮಾಡುವುದಕ್ಕೆ ಮಿತ್ರರ ಸಹಾಯ ಪಡೆಯಲಿದ್ದೀರಿ. ಹಣ ಗಳಿಕೆಗೆ ಅನ್ಯ ಮಾರ್ಗಗಳತ್ತ ಚಿಂತನೆ ನಡೆಸಲಿದ್ದೀರಿ.

ಮಕರ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ಪರ ಊರಿಗೆ ಪ್ರಯಾಣ ಮಾಡಲಿದ್ದೀರಿ. ವ್ಯಾವಹಾರಿಕವಾಗಿ ನಿಮ್ಮ ಕೆಲಸಗಳು ಅಡೆತಡೆಯೊಂದಿಗೇ ಸಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ.

ಕುಂಭ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಯೋಗ್ಯ ವೈವಾಹಿಕ ಸಂಬಂದಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಬಿಡುವು ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಮೀನ: ಎಂದೋ ಮಾಡಬೇಕಿದ್ದ ಕೆಲಸವನ್ನು ಇಂದೇ ಆರಂಭಿಸಿದರೆ ಉತ್ತಮ. ವಾಹನಾದಿ ಸೌಕರ್ಯಗಳನ್ನು ತಮ್ಮದಾಗಿಸಿಕೊಳ್ಳಲು ಖರ್ಚು ವೆಚ್ಚಗಳಾದೀತು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments