ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 12 ಆಗಸ್ಟ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗಿರುವ ಸವಾಲುಗಳನ್ನು ಎದುರಿಸಿ ನಿಲ್ಲುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ವ್ಯಾವಹಾರಿಕವಾಗಿ ಲಾಭ ಕಂಡುಬಂದರೂ ಹಿತಶತ್ರುಗಳ ಕಾಟ ತಪ್ಪದು. ತಾಳ್ಮೆ ಸಂಯಮವಿರಲಿ.

ವೃಷಭ: ನಿಮ್ಮ ಭವಿಷ್ಯದ ಜೀವನಕ್ಕೆ ಬೇಕಾದ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಶಿಸಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿಯಿರಲಿ.

ಮಿಥುನ: ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾದೀತು. ಎಚ್ಚರಿಕೆಯಿಂದ ವರ್ತಿಸಿ. ಮಾತಿನ ಮೇಲೆ ನಿಗಾ ಇರಲಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ಹೊಸ ಬಂಡವಾಳ ಹೂಡಿಕೆ ಯೋಜನೆಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಸಂಗಾತಿಯ ಬಯಕೆ ಪೂರ್ತಿ ಮಾಡಲಿದ್ದೀರಿ.

ಸಿಂಹ: ಹೊಸ ಜನರ ಭೇಟಿ, ಮಾತುಕತೆಯಿಂದ ಹೊಸ ವಿಚಾರಗಳು ಹೊಳೆಯಲಿವೆ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಲಿವೆ. ನೂತನ ದಂಪತಿಗಳಿಗೆ ಸದ್ಯದಲ್ಲೇ ಮಧುಚಂದ್ರ ಯೋಗ ಕೂಡಿಬರುವುದು.

ಕನ್ಯಾ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳನ್ನು ಹೊರಲು ಸಿದ್ಧತೆ ನಡೆಸಬೇಕಾಗುತ್ತದೆ. ಸಂತಾನಾಪೇಕ್ಷಿತ ದಂಪತಿಗಳಿಗೆ ಶುಭ ಸೂಚನೆ ದೊರೆಯಲಿದೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ತುಲಾ: ನಿಮ್ಮ ಮನಸ್ಸಿನ ಭಾವನೆಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಲು ಸಿದ್ಧರಾಗಲಿದ್ದೀರಿ. ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ.

ವೃಶ್ಚಿಕ: ಕಾರ್ಯನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾದೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕೃಷಿಕರಿಗೆ ಬೆಳೆ ಕೈಗೆ ಬಂದು ಲಾಭವಾಗಲಿದೆ.

ಧನು: ವೃತ್ತಿರಂಗದಲ್ಲಿ ನಿಮ್ಮ ಎದುರಾಳಿಗಳೂ ಬೆರಗಾಗುವಂತೆ ಕೆಲಸ ಮಾಡಲಿದ್ದೀರಿ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದ್ದು, ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕುವುದು ಉತ್ತಮ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಇತರರೊಂದಿಗೆ ಹೇಳಿಕೊಳ್ಳಲು ಸಂಕೋಚ ಪಡಲಿದ್ಧೀರಿ. ಕಳೆದು ಹೋದ ಸಂಬಂಧಗಳನ್ನು ಮತ್ತೆ ಬೆಸೆಯುವ ಪ್ರಯತ್ನ ನಡೆಸುವಿರಿ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ.

ಕುಂಭ: ಎಷ್ಟೋ ದಿನಗಳ ನಂತರ ಇಷ್ಟಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಹಣಕಾಸಿನ ವಿಚಾರವಾಗಿ ಆಪ್ತರೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮ ಹಳೆಯ ಗುಟ್ಟುಗಳು ಬಯಲಿಗೆ ಬರಲಿವೆ.

ಮೀನ: ಅನಿರೀಕ್ಷಿತವಾಗಿ ಬರುವ ನೆಂಟರಿಷ್ಟರಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರುವುದು. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಒದಗಿ ಬರಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments