Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 16 ಆಗಸ್ಟ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಉದ್ದೇಶಿತ ಕೆಲಸಗಳಿಗೆ ಅಡೆತಡೆಗಳುಂಟಾದೀತು. ಆದರೂ ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ಮಾಡದ ತಪ್ಪಿನ ಬಗ್ಗೆ ಅನಗತ್ಯ ಕೀಳರಿಮೆ ಬೇಕಾಗಿಲ್ಲ. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಚಿಂತೆ ಬೇಡ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳು ಸಹೋದ್ಯೋಗಿಗಳೂ ಅಸೂಯೆಪಡುವಂತೆ ಇರಲಿದೆ. ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ವಾಹನ, ಭೂಮಿ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ನಿಮ್ಮ ಕೆಲಸಗಳಲ್ಲಿ ಸಂಗಾತಿಯ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ವೃತ್ತಿರಂಗದಲ್ಲಿ ಶತ್ರುಭಯ ಕಾಡೀತು. ತಾಳ್ಮೆಯಿರಲಿ.

ಸಿಂಹ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಾಧಿಕಾರದ ಕನಸು ಸದ್ಯದಲ್ಲೇ ನನಸಾಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ಕನ್ಯಾ: ಕೌಟುಂಬಿಕವಾಗಿ ಕೆಲವು ಮಹತ್ವದ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಪಡೆಯಲಿದ್ದೀರಿ.

ತುಲಾ: ನಿರುದ್ಯೋಗಿಗಳು ಸೂಕ್ತ ಉದ್ಯೋಗಕ್ಕಾಗಿ ಹುಡುಕಾಟ ಮುಂದುವರಿಸಲಿದ್ದೀರಿ. ಸ್ವಯ ವೃತ್ತಿಯವರಿಗೆ ಲಾಭದ ಚಿಂತೆ ಕಾಡೀತು. ಹಣಗಳಿಕೆಗೆ ಅನ್ಯ ಮಾರ್ಗಗಳತ್ತ ಚಿಂತನೆ ನಡೆಸಲಿದ್ದಾರೆ. ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ.

ವೃಶ್ಚಿಕ: ವೃತ್ತಿರಂಗದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗುವುದು. ಮಕ್ಕಳ ಭವಿಷ್ಯಕ್ಕಾಗಿ ಮಹತ್ವದ ನಿರ್ಧಾರ ಕೈಗೊಳ‍್ಳಲಿದ್ದೀರಿ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳಾದೀತು. ವಾಹನ ಸಂಚಾರ ಮಾಡುವಾಗ ಅಪಘಾತದ ಭಯ ಕಾಡಲಿದೆ.

ಧನು: ನಿಮ್ಮದಲ್ಲದ ತಪ್ಪಿಗೆ ಕೊರಗುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ವ್ಯವಹಾರ ಕ್ಷೇತ್ರದಲ್ಲಿ ಇನ್ನೊಬ್ಬರ ಮೇಲೆ ಅತಿಯಾದ ಅವಲಂಬನೆಯೂ ಒಳ್ಳೆಯದಲ್ಲ. ಸಂಗಾತಿಯ ಸಲಹೆಗಳನ್ನು ಸ್ವೀಕರಿಸಿ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ನಿಮ್ಮ ಮಾತಿಗೆ ಯಾರೂ ಬೆಲೆಕೊಡುತ್ತಿಲ್ಲ ಎಂಬ ಬೇಸರ ಕಾಡೀತು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ತಾಳ್ಮೆ, ಸಂಯಮ ಅಗತ್ಯ.

ಕುಂಭ: ನಿಮ್ಮ ಮನಸ್ಸಿನಲ್ಲಿ ನಡೆಯುತ್ತಿರುವ ದ್ವಂದ್ವಗಳಿಗೆ ಪ್ರೀತಿ ಪಾತ್ರರು ಪರಿಹಾರ ಕೊಡಲಿದ್ದಾರೆ. ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬಂದೀತು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಅಂದುಕೊಂಡ ಕೆಲಸಗಳು ನಿರೀಕ್ಷಿತ ರೀತಿಯಲ್ಲಿ ಸಾಗಲಿವೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬಂದೀತು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ದಾಯಾದಿ ಕಲಹಗಳಿಗೆ ಅಂತ್ಯ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments