Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 18 ಆಗಸ್ಟ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸಿನಲ್ಲಿ ಒಂದು ರೀತಿಯ ಬೇಸರದ ಛಾಯೆ ಇರುವುದು. ನೀವು ಅಂದುಕೊಂಡ ರೀತಿಯಲ್ಲಿ ಕೆಲಸಗಳು ನಡೆಯುತ್ತಿಲ್ಲ ಎಂಬ ನೋವು ಕಾಡಲಿದೆ. ಆಪ್ತರೊಂದಿಗೆ ದುಃಖ ಹಂಚಿಕೊಂಡು ಹಗುರವಾಗಲಿದ್ದೀರಿ.

ವೃಷಭ: ಹಿಂದೆ ಹೂಡಿಕೆ ಮಾಡಿದ್ದ ಯೋಜನೆಗಳು ಇಂದು ಫಲ ಕೊಡಲಿವೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರು ಕಂಡುಬಂದೀತು.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡದಿಂದ ಕೊಂಚ ಬಿಡುವು ಸಿಗಲಿದೆ. ಕಿರು ಸಂಚಾರ ಮಾಡಬೇಕಾಗಬಹುದು.

ಕರ್ಕಟಕ: ನೀವು ಅಂದುಕೊಂಡಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾದೀತು. ಶನಿದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ನಿರುದ್ಯೋಗಿಗಳ ಕಂಟಕಗಳು ದೂರವಾಗಲಿದೆ. ತಾಳ್ಮೆಯಿರಲಿ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳಿಗೆ ಕೆಲವೊಮ್ಮೆ ಕಿವಿಗೊಡಬೇಕಾಗುತ್ತದೆ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಿ ಸಂತೋಷ ಕೊಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ವಿರಾಮ ಸಿಗಲಿದೆ.

ಕನ್ಯಾ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಅಂದುಕೊಂಡ ಕೆಲಸ ಸುಗಮವಾಗಿ ನೆರವೇರಲಿದೆ. ಕೊಡು-ಕೊಳ್ಳುವ ವ್ಯವಹಾರದಿಂದ ಲಾಭ ಕಂಡುಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶಗಳು ಎದುರಾದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ವೃಶ್ಚಿಕ: ಇಂದು ನೀವು ಕೈಹಾಕುವ ಕೆಲಸದಲ್ಲಿ ಗೆಲುವು ಶತಸ್ಸಿದ್ಧ. ಆದರೆ ಹಿತಶತ್ರುಗಳ ಹುನ್ನಾರ ಅರಿತು ನಡೆಯಿರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಧನು: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹೊಸ ದಾರಿ ಕಂಡುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರ, ವಹಿವಾಟಿನಲ್ಲಿ ಅಡೆತಡೆಯಿದ್ದರೂ ಮುನ್ನಡೆ ಕಂಡುಬರಲಿದೆ.

ಮಕರ: ಯಾವುದೇ ವಿಚಾರವಾದರೂ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ನೀವು ಇಂದು ಇಡುವ ಹೆಜ್ಜೆ ಭವಿಷ್ಯಕ್ಕೆ ಪೂರಕವಾಗಲಿದೆ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗ ಕಂಡುಬಂದೀತು. ಆರ್ಥಿಕವಾಗಿ ಹಣಕಾಸಿನ ಸ್ಥಿತಿಗತಿ ಸುಧಾರಿಸಲಿದ್ದು, ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಪ್ರೀತಿ ಪಾತ್ರರ ಸಮಾಗವಾಗಲಿದೆ.

ಮೀನ: ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆ ಪಡೆಯಲಿದ್ದೀರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ದುರ್ಗಾ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva mantra: ಇಂದು ಶಿವ ಅಷ್ಟೋತ್ತರ ತಪ್ಪದೇ ಓದಿ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

Anjaneya Mantra: ಶನಿದೋಷವಿದ್ದವರು ಆಂಜನೇಯನ ಈ ಸ್ತೋತ್ರವನ್ನು ಓದಿ

Lakshmi Mantra: ಮನಸ್ಸಿನ ಭಯ ದೂರ ಮಾಡಲು ಧೈರ್ಯ ಲಕ್ಷ್ಮಿ ಸ್ತೋತ್ರ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments