Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 23 ಆಗಸ್ಟ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಸಾಮಾಜಿಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಮಕ್ಕಳ ಸಾಧನೆ ಮನಸ್ಸಿಗೆ ತೃಪ್ತಿ ನೀಡಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ವೃಷಭ: ದೈಹಿಕವಾಗಿ ನಿಮ್ಮ ಆರೋಗ್ಯ ಸ್ಥಿತಿಗೆ ಪರಿಹಾರ ಕಂಡುಕೊಂಡರೂ ಮಾನಸಿಕವಗಿ ಋಣಾತ್ಮಕ ಚಿಂತನೆಗಳಿಂದ ಬೇಸರಕ್ಕೊಳಗಾಗುವಿರಿ. ಆಸ್ತಿ ವ್ಯವಹಾರದಲ್ಲಿ ಲಾಭ-ನಷ್ಟ ಸಮನಾಗಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಹಿಂದೆ ಇದ್ದ ಸಮಸ್ಯೆಗಳು ದೂರವಾಗಿ ಕೌಟುಂಬಿಕ ಸಮೃದ್ಧಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಹಿರಿಯರಿಗೆ ದಾನ ಧರ್ಮಾದಿ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಹಣಕಾಸಿನ ಹರಿವಿಗೆ ಅಡೆತಡೆಯುಂಟಾದೀತು. ಕಷ್ಟದಲ್ಲಿರುವಾಗ ಮಿತ್ರರ ಸಹಾಯ ದೊರೆಯಲಿದೆ. ಚಿಂತೆ ಬೇಡ.

ಸಿಂಹ: ಅನಗತ್ಯ ಯೋಚನೆಗಳಿಂದ ಮನಸ್ಸು ಹೈರಾಣಾಗಿಸುವ ಬದಲು ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ನಿಮ್ಮ ಕೀರ್ತಿ ಇನ್ನಷ್ಟು ಹೆಚ್ಚಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನ ವೃದ್ಧಿಗೊಳ್ಳುವುದು. ತಾಳ್ಮೆಯಿರಲಿ.

ಕನ್ಯಾ: ನಿಮ್ಮ ಯಶಸ್ಸು ನಿಮ್ಮ ಮಾತಿನ ಮೇಲೆ ಅಡಗಿದೆ. ತಾಳ್ಮೆಯಿಂದ ವ್ಯವಹರಿಸಿ. ಆತುರದ ನಿರ್ಧಾರದಿಂದ ತೊಂದರೆಗಳಾದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮಕ್ಕಳಿಂದ ಸಂತಸ ಸಿಗಲಿದೆ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ತೊಡಗಿಸಿಕೊಂಡವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಸುದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ವೃಶ್ಚಿಕ: ಕೂಡಿಟ್ಟ ಹಣ ವ್ಯರ್ಥವಾಗದಂತೆ ಯೋಜನೆ ರೂಪಿಸಿಕೊಳ್ಳಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈ ಹಿಡಿದ ಕೆಲಸಗಳು ಯಶಸ್ವಿಯಾದೀತು. ವ್ಯವಹಾರ ನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಧನು: ಉದ್ಯೋಗ ಸಂಬಂಧೀ ತೊಡಕುಗಳ ನಿವಾರಣೆಗೆ ಶನಿ ದೇವರ ಪ್ರಾರ್ಥನೆ ಮಾಡಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರು ಕಂಡುಬಂದೀತು. ಕಾಳಜಿ ಅಗತ್ಯ. ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಕಾಡೀತು. ತಾಳ್ಮೆಯಿರಲಿ.

ಮಕರ: ಭವಿಷ್ಯದ ಯೋಜನೆಗಳಿಗೆ ಅಡಿಗಲ್ಲು ಹಾಕಲಿದ್ದೀರಿ. ಸನ್ಮಿತ್ರರ ಸಂಘ ಒಳಿತು ಮಾಡಲಿದೆ. ಕುಟುಂಬದ ಕ್ಷೇಮಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಮನಸ್ಸಿನ ಮಾತಿಗೆ ಕಿವಿಗೊಟ್ಟು ಕೆಲಸ ಮಾಡುವುದರಿಂದ ಕೆಲಸದಲ್ಲೂ ತೃಪ್ತಿ, ಯಶಸ್ಸು ಸಿಕ್ಕೀತು. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ದಾಂಪತ್ಯದಲ್ಲಿ ಸುಖಕ್ಕೆ ಕೊರತೆಯಿರದು. ಚಿಂತೆ ಬೇಡ.

ಮೀನ: ಸ್ವಂತ ಪರಿಶ್ರಮದಿಂದ ಮಾಡುವ ಕೆಲಸಕ್ಕೆ ಯಶಸ್ಸು ಸಿಕ್ಕೇ ಸಿಗುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಂಡುಬಂದೀತು.  ಆತ್ಮೀಯರನ್ನು ಭೇಟಿಯಾದ ಖುಷಿ ಸಿಗಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments