ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 20 ಸೆಪ್ಟಂಬರ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಿದ್ಯಾರ್ಥಿಗಳಿಗೆ ಇಂದು ಶುಭ ದಿನವಾಗಿದ್ದು ಭವಿಷ್ಯದ ಹಾದಿ ಸುಗಮವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ತಪ್ಪದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟ ಕಂಡುಬರಲಿದ್ದು, ಸಮಸ್ಯೆಗಳ ಪರಿಹಾರಕ್ಕೆ ಕ್ರಿಯಾತ್ಮಕವಾಗಿ ಯೋಚಿಸಬೇಕಿದೆ. ವೈಯಕ್ತಿಕ ವಿಚಾರಗಳಲ್ಲಿ ಬೇರೆಯವರ ಹಸ್ತಕ್ಷೇಪಕ್ಕೆ ಅವಕಾಶಕೊಡಬೇಡಿ.

ಮಿಥುನ: ಹಿರಿಯರೊಂದಿಗೆ ಅನಗತ್ಯವಾಗಿ ಸಂಘರ್ಷಕ್ಕೆಡೆಮಾಡಿಕೊಡಬೇಡಿ. ಸಹೋದ್ಯೋಗಿಗಳ ಸಲಹೆಗಳು ಉಪಯೋಗಕ್ಕೆ ಬರಲಿವೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಶೈಕ್ಷಣಿಕ ರಂಗದಲ್ಲಿ ಉದ್ಯೋಗದಲ್ಲಿರುವವರಿಗೆ ಉನ್ನತ ಸ್ಥಾನಕ್ಕೇರುವ ಯೋಗವಿದೆ. ಸಾಮಾಜಿಕವಾಗಿ ನಿಮ್ಮ ಕೀರ್ತಿ ಹೆಚ್ಚಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಚಿಂತೆ ಬೇಡ.

ಸಿಂಹ: ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ ನಿಮ್ಮ ಭವಿಷ್ಯಕ್ಕೆ ಹಣ ಕೂಡಿಡುವ ಬಗ್ಗೆ ಚಿಂತಿಸಲಿದ್ದೀರಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಕಾರ್ಯಸಾಧನೆಗೆ ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಕನ್ಯಾ: ಸಾಂಸಾರಿಕವಾಗಿ ಸುಂದರ ದಿನಗಳಾಗಿದ್ದು, ಮಕ್ಕಳಿಂದ ಸಂತೋಷ ಸಿಗಲಿದೆ. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಂದ ಸಹಾಯ ಒದಗಿಬರಲಿದೆ. ತಾಳ್ಮೆಯಿರಲಿ.

ತುಲಾ: ಹೊಸ ಕೆಲಸಗಳಿಗೆ ಬಂಡವಾಳ ಹೂಡಲು ಚಿಂತನೆ ನಡೆಸಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಕ್ರಿಯಾತ್ಮಕ ಯೋಚನೆಗಳು ಉಪಯೋಗಕ್ಕೆ ಬರುವುದು. ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷಿತ ಧನ ಸಂಪಾದನೆಯಾಗಲಿದೆ.

ವೃಶ್ಚಿಕ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಕೆಳ ಹಂತದ ನೌಕರರಿಗೆ ಉದ್ಯೋಗ ಉಳಿಸಿಕೊಳ್ಳುವ ಸವಾಲು ಎದುರಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆ, ಸಂಯಮವಿರಲಿ.

ಧನು: ನಿಮ್ಮ ಇಷ್ಟಾನುಸಾರ ನಿರ್ಧಾರ ತೆಗೆದುಕೊಳ್ಳಲು ಹೋಗಿ ಆಪ್ತರ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ಉದ್ಯಮಿಗಳಿಗೆ ಉನ್ನತಿಯ ಯೋಗವಿದೆ. ನೆರೆಹೊರೆಯವರೊಂದಿಗೆ  ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಮಕರ: ಬೇಡದ ಯೋಚನೆಗಳಿಂದ ಮಾನಸಿಕವಾಗಿ ಕುಗ್ಗಿ ಹೋಗುವ ಪ್ರಸಂಗ ಎದುರಾದೀತು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಹಿರಿಯರಿಗೆ ತೀರ್ಥ ಯಾತ್ರೆ ಕೈಗೊಳ್ಳುವ ಯೋಗ ಕೂಡಿಬರಲಿದೆ.

ಕುಂಭ: ಅರ್ಧಕ್ಕೇ ನಿಂತ ಕೆಲಸಗಳಿಗೆ ಮರು ಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ಧೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಮೀನ: ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಸಾಂಸಾರಿಕವಾಗಿ ಸಂತೋಷದ ವಾತಾವರಣವಿರಲಿದೆ. ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ಭೂಮಿ, ವಾಹನಾದಿ ಲಾಭಗಳಾಗುವ ಸಾಧ‍್ಯತೆಯಿದೆ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಮುಂದಿನ ಸುದ್ದಿ
Show comments