Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 21 ಸೆಪ್ಟಂಬರ್ 2021 (08:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸರಕಾರಿ ಕಚೇರಿ ಕೆಲಸಗಳಲ್ಲಿ ಯಶಸ್ಸು ಕಂಡುಬರಲಿದ್ದು, ಅಂದುಕೊಂಡ ಕೆಲಸಗಳು ನೆರವೇರಲಿದೆ. ಕೌಟುಂಬಿಕವಾಗಿ ನೂತನ ಹೊಣೆಗಾರಿಕೆ ಹೆಗಲಿಗೇರಲಿದೆ. ಕಾರ್ಯ ನಿಮಿತ್ತ ಸಂಚಾರ ಮಾಡಬೇಕಾಗಬಹುದು.

ವೃಷಭ: ಸದಾ ಚಟುವಟಿಕೆಯಿಂದ ಕೂಡಿರುವ ನಿಮಗೆ ಇಂದು ಮಾನಸಿಕವಾಗಿ ನಿರುತ್ಸಾಹ ಕಾಡಲಿದೆ. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.

ಮಿಥುನ: ದಾಂಪತ್ಯ ಸುಖಕ್ಕೆ ಕೊರತೆಯಿರದು. ಆದರೆ ನೆರೆಹೊರೆಯವರ ಚಾಡಿ ಮಾತುಗಳಿಂದ ಮನಸ್ಸಿಗೆ ನೋವಾಗುವ ಸಂದರ್ಭ ಎದುರಾದೀತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ಕರ್ಕಟಕ: ಗುರುಹಿರಿಯರ ಹಿತೋಪದೇಶಗಳು ಉಪಯೋಗಕ್ಕೆ ಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದ್ದು, ಹಣಕಾಸಿನ ಹರಿವು ಹೆಚ್ಚಾಗಲಿದೆ. ಕೃಷಿಕರಿಗೆ ಹೊಸ ಐಡಿಯಾಗಳು ಹೊಳೆಯಲಿವೆ. ತಾಳ್ಮೆ ಅಗತ್ಯ.

ಸಿಂಹ: ಮನಸ್ಸಿನಲ್ಲಿ ಬಚ್ಚಿಟ್ಟುಕೊಂಡಿದ್ದನ್ನು ಹೊರಗೆಳೆಯುವ ಕಾಲ. ಸಹೋದ್ಯೋಗಿಗಳಿ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಕಾರ್ಯಾರಂಭದಲ್ಲಿ ವಿಘ್ನಗಳು ಎದುರಾದರೂ, ಎದೆಗುಂದದೇ ನಡೆದರೆ ಮುಂದೆ ಯಶಸ್ಸು ನಿಮ್ಮದಾಗುವುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆಯಾದೀತು. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ.

ತುಲಾ: ಇನ್ನೊಬ್ಬರ ಮೇಲೆ ಅತಿಯಾದ ಅವಲಂಬನೆಯೂ ಕೆಲವೊಮ್ಮೆ ತೊಂದರೆಗೆ ಕಾರಣವಾದೀತು. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಲಿದೆ. ಮನಸ್ಸಿನ ನೆಮ್ಮದಿಗಾಗಿ ದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ನಿರ್ಧಾರ ಅಸ್ಥಿರಗೊಳಿಸುವ ಘಟನೆಗಳು ನಡೆಯಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಇಷ್ಟ ಭೋಜನ ಮಾಡುವ ಯೋಗವಿದೆ.

ಧನು: ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಬೇಕೆನ್ನುವ ನಿಮ್ಮ ಆಕಾಂಕ್ಷೆ ಸದ್ಯದಲ್ಲೇ ನನಸಾಗಲಿದೆ. ಮಾನಸಿಕವಾಗಿ ಗಟ್ಟಿಯಾಗಬೇಕಾದ ಕಾಲವಿದು. ಅನಗತ್ಯ ಸಂಘರ್ಷಗಳಿಗೆ ಅವಕಾಶ ಕೊಡಬೇಡಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮಕರ: ಕಾರ್ಯದೊತ್ತಡ, ದೀರ್ಘ ಪ್ರಯಾಣದಿಂದ ದೇಹಾಯಾಸವಾಗಲಿದೆ. ಪಾಲುದಾರಿಕೆ ವ್ಯವಹಾರಗಳಿಂದ ಲಾಭ ಕಂಡುಬರಲಿದೆ. ಆದರೆ ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ತಾಳ್ಮೆಯಿಂದ ಕಾರ್ಯನಿರ್ವಹಿಸಿ.

ಕುಂಭ: ಇಷ್ಟ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ಆದರೆ ಮಾನಸಿಕವಾಗಿ ಸಂತೋಷದಾಯಕ ದಿನವಾಗಿರಲಿದೆ. ದಾಂಪತ್ಯದಲ್ಲಿ ಸುಖವಿದ್ದೀತು. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ.

ಮೀನ: ಉದ್ಯೋಗ ನಿಮಿತ್ತ ಪರವೂರಿಗೆ ಪ್ರಯಾಣ ಮಾಡಬೇಕಾಗಬಹುದು. ಸತ್ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments