ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 2 ಅಕ್ಟೋಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪ್ರೀತಿ ಪಾತ್ರರ ಖುಷಿಗಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ವೈಯಕ್ತಿಕ ಜೀವನದಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳಾಗಲಿವೆ. ಆತ್ಮೀಯರನ್ನು ಭೇಟಿಯಾಗಲು ಮನಸ್ಸು ಹಾತೊರೆಯಲಿದೆ. ತಾಳ್ಮೆ, ಸಂಯಮವಿರಲಿ.

ವೃಷಭ: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಸಾಂಸಾರಿಕವಾಗಿ ತಾಳ್ಮೆ ಅತೀ ಅಗತ್ಯ. ಬೇರೆಯವರ ಜೀವನದಲ್ಲಿ ಮೂಗು ತೂರಿಸುವ ಪ್ರಯತ್ನ ಬೇಡ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡುವ ಕಾಲವಿದು.

ಮಿಥುನ: ಹಿಂದೆ ಅಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಹಿರಿಯರ ಹಿತೋಪದೇಶಗಳು ಅಪಥ್ಯವೆನಿಸೀತು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಹೊಸ ವಾತಾವರಣದಲ್ಲಿ ಕೆಲಸ ಮಾಡುವ ಸಂದರ್ಭ ಎದುರಾಗಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನೆಗೆ ಅತಿಥಿಗಳ ಆಗಮನವಾಗಲಿದೆ. ಹಿರಿಯರು ದೇವತಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವರು.

ಸಿಂಹ: ಅಧ್ಯಯನದಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆಯ ಯೋಗವಿದೆ. ಹೊಸ ವಿಚಾರಗಳಿಗೆ ಮನಸ್ಸು ತೆರೆದುಕೊಳ್ಳಲಿದೆ. ಮಾತಿನ ಮೇಲೆ ನಿಗಾ ಇರಲಿ. ಬೇರೆಯವರಿಗೆ ಸಹಾಯ ಮಾಡಿದರೆ ಅದಕ್ಕೆ ಪ್ರತಿಫಲ ಪಡೆಯಲಿದ್ದೀರಿ.

ಕನ್ಯಾ: ಕುಟುಂಬ ಸದಸ್ಯರೊಂದಿಗೆ ಖುಷಿಯಿಂದ ಸಮಯ ಕಳೆಯುವ ಯೋಗ ನಿಮ್ಮದಾಗಲಿದೆ. ಮಿತ್ರರ ಭೇಟಿಯಾಗಲಿದ್ದೀರಿ. ಇಷ್ಟಭೋಜನ ಸವಿಯುವ ಯೋಗ. ಮಕ್ಕಳಿಂದ ಸಂತೋಷ ಸಿಗುವುದು.

ತುಲಾ: ಅನಿರೀಕ್ಷಿತ ಉಡುಗೊರೆಗಳು ಸಿಗಲಿದ್ದು, ಮನಸ್ಸಿಗೆ ಸಂತೋಷವಾಗಲಿದೆ. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಮಹಿಳೆಯರಿಗೆ ಹೊಸ ಬಗೆಯ ತಿನಿಸು ಮಾಡುವ ಯೋಚನೆ ಬರಲಿದೆ. ಚಿಂತೆ ಬೇಡ.

ವೃಶ್ಚಿಕ: ಸ್ವಯಂ ಉದ್ಯೋಗಿಗಳಿಗೆ ವ್ಯವಹಾರದಲ್ಲಿ ಅಡೆತಡೆಗಳು ಕಂಡುಬಂದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಧನು: ಪಾಲುದಾರಿಕೆ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಸನ್ಮಿತ್ರರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಹಾಯವಾಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದ ಕಡೆಗೆ ಗಮನ ಕೇಂದ್ರೀಕರಿಸಬೇಕಾಗುತ್ತದೆ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಸಾಂಸಾರಿಕ ಸುಖಕ್ಕೆ ಕೊರತೆಯಿರದು. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ದೇಹಾರೋಗ್ಯದಲ್ಲಿ ಸಮಸ್ಯೆಗಳು ದೂರವಾಗಿ ನೆಮ್ಮದಿಯಾಗುವುದು.

ಕುಂಭ: ಪತಿ-ಪತ್ನಿಯರರ ನಡುವೆ ಕ್ಷುಲ್ಲುಕ ವಿಚಾರಕ್ಕೆ ಭಿನ್ನಾಭಿಪ್ರಾಯಗಳು ಮೂಡಿಬರಲಿವೆ. ನಿಮ್ಮ ವಿಚಾರಧಾರೆಗಳನ್ನು ಇತರರ ಮೇಲೆ ಹೇರಲು ಹೋಗಬೇಡಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಕಾರ್ಯರಂಗದಲ್ಲಿ ಹೆಚ್ಚಿನ ಸಫಲತೆ ಕಂಡುಬರಲಿದೆ. ಮಹಿಳೆಯರಿಗೆ ಬಿಡುವಿನ ದಿನದ ವಿರಾಮ ಸಿಗಲಿದೆ. ವ್ಯವಹಾರಗಳಲ್ಲಿರುವ ಅಡೆತಡೆಗಳನ್ನು ನಿವಾರಿಸಲು ಮುಂದಾಗಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments