Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 7 ಅಕ್ಟೋಬರ್ 2021 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪ್ರತಿಕೂಲ ಸನ್ನಿವೇಶದಿಂದಾಗಿ ನೀವು ಕೈಗೊಳ್ಳುವ ನಿರ್ಧಾರಗಳೆಲ್ಲವೂ ತಿರುಗಿಬೀಳುವ ಸಾಧ್ಯತೆಯಿದೆ. ತಾಳ್ಮೆ, ಸಂಯಮವಿರಲಿ. ಮಹಿಳೆಯರು ಗೃಹಕೃತ್ಯಗಳಿಂದ ಹೈರಾಣಾಗುವರು. ಸಂಗಾತಿಯ ಸಹಕಾರ ಪಡೆಯಲಿದ್ದೀರಿ.

ವೃಷಭ: ನಾಲಿಗೆಗೆ ಪ್ರಿಯವಾದ ಭೋಜನ ತಯಾರಿಸಲಿದ್ದೀರಿ. ಇಷ್ಟಮಿತ್ರರ ಭೇಟಿ ಮನಸ್ಸಿಗೆ ಸಂತಸವುಂಟು ಮಾಡಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಬರಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ನಿಮ್ಮ ಮನಸ್ಸಿಗೆ ಭಾವನೆಗಳಿಗೆ ಧಕ್ಕೆಯಾಗಲಿದೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳುಂಟಾದೀತು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಪಡೆಯಲು ದೂರ ಸಂಚಾರ ಮಾಡಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಕಾರಣವಾಗಬಹುದಾದ ಅಂಶಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಸ್ವಲ್ಪ ಮಟ್ಟಿಗೆ ಪರಿಹಾರವಾಗಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ದೂರ ಪ್ರಯಾಣ, ಪ್ರವಾಸಾದಿಗಳಿಂದ ಮನಸ್ಸಿಗೆ ಸಂತಸವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ. ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಕನ್ಯಾ: ಕೌಟುಂಬಿಕವಾಗಿ ಅಮೂಲ್ಯವಾದ ಸಮಯ ಕಳೆಯಲಿದ್ದೀರಿ. ಮಕ್ಕಳಿಗೆ ಹೊಸ ವಸ್ತುಗಳ ಖೀರಿದಿ ಮಾಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ವಾಹನ ರಿಪೇರಿ ಕೆಲಸ ಮಾಡಬೇಕಾಗಿ ಬಂದೀತು.

ತುಲಾ: ನಿಮ್ಮ ಸಮಯ ಬರುವವರೆಗೂ ತಾಳ್ಮೆಯಿಂದ ಕಾಯುವುದು ಉತ್ತಮ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ವೃಶ್ಚಿಕ: ಹೊಸ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಉದ್ದೇಶಿತ ಕೆಲಸಗಳಿಗೆ ಹಣಕಾಸಿನ ಅಡಚಣೆ ಬಂದೀತು. ಮಿತ್ರರ ಸಹಾಯ ಪಡೆಯಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ.

ಧನು: ಹಿಂದೆ ಕೊಟ್ಟ ಮಾತು ಪಾಲಿಸಲೇಬೇಕಾದ ಅನಿವಾರ್ಯತೆ ಎದುರಾಗಲಿದೆ. ಕೌಟುಂಬಿಕವಾಗಿ ಬಂಧು ಜನರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು.

ಮಕರ: ರಾಜಕೀಯ ರಂಗದಲ್ಲಿರುವವರಿಗೆ ತಮ್ಮ ಸ್ಥಾನ ಸುಗಮಗೊಳಿಸಲು ತೊಡಕುಗಳು ಎದುರಾದೀತು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಯಾವುದೇ ತೊಂದರೆಯಾಗದು. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಮನಸ್ಸಿಗೆ ಹೊಸ ವಿಚಾರಗಳು ಹೊಳೆಯಲಿದ್ದು, ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಓದಿಗೆ ಭಂಗ ತರುವ ಘಟನೆಗಳಾದೀತು, ಎಚ್ಚರಿಕೆಯಿರಲಿ. ವಾಹನ ಖರೀದಿ ಯೋಗ ಸದ್ಯದಲ್ಲೇ ನನಸಾಗಲಿದೆ.

ಮೀನ: ನೂತನ ದಂಪತಿಗಳಿಗೆ ಸದ್ಯದಲ್ಲೇ ಸಂತಾನ ಫಲ ಸೂಚನೆ ದೊರೆಯಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಪೂರೈಸಲು ಖರ್ಚು ವೆಚ್ಚಗಳಾದೀತು. ವಿವೇಚನೆಯಿಂದ ಯೋಚನೆ ಮಾಡಿ ಹೆಜ್ಜೆಯಿಡುವುದರಿಂದ ಸಂಭಾವ್ಯ ಅಪಾಯ ತಪ್ಪಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments