Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 9 ಅಕ್ಟೋಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಾತಿನ ಮೇಲೆ ನಿಗಾ ಇರಲಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ.

ವೃಷಭ: ಭವಿಷ್ಯಕ್ಕಾಗಿ ಕೆಲವೊಂದು ಯೋಜನೆ ಹಾಕಲಿದ್ದೀರಿ. ಸಂಗಾತಿಯೊಂದಿಗೆ ಪರಾಮರ್ಶಿಸಿ ಯಾವುದೇ ನಿರ್ಧಾರ ಕೈಗೊಳ್ಳುವುದು ಉತ್ತಮ. ಉದ್ಯಮಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮನೆಯಲ್ಲಿ ನಿಮ್ಮ ಮಾತುಗಳಿಂದ ಇತರರಿಗೆ ನೋವುಂಟಾಗುವ ಸಂದರ್ಭ ಎದುರಾದೀತು. ಸಂಬಂಧಗಳನ್ನು ಸೂಕ್ಷ್ಮವಾಗಿ ನಿಭಾಯಿಸಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಪಲ ಸಿಗಲಿದೆ. ಚಿಂತೆ ಬೇಡ.

ಕರ್ಕಟಕ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಸದವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭರವಸೆ ಸಿಗಲಿದೆ.

ಸಿಂಹ: ವೈಯಕ್ತಿಕ ಜೀವನದಲ್ಲಿ ಪ್ರಗತಿ ಕಂಡುಬರಲಿದೆ. ಹಿಂದೆ ಮಾಡಿದ್ದ ಒಳ್ಳೆಯ ಕೆಲಸಗಳಿಗೆ ತಕ್ಕ ಪ್ರತಿಫಲ ಪಡೆಯಲಿದ್ದೀರಿ. ಯಂತ್ರೋಪಕರಣ ವೃತ್ತಿಯಲ್ಲಿರುವವರು ಅಪಘಾತವಾಗದಂತೆ ಎಚ್ಚರಿಕೆ ವಹಿಸಬೇಕು.

ಕನ್ಯಾ: ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಮಕ್ಕಳ ವಿಚಾರದಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಹೋದರರೊಂದಿಗೆ ಭಿನ್ನಾಭಿಪ್ರಾಯವಾಗದಂತೆ ಎಚ್ಚರಿಕೆ ವಹಿಸಿ.

ತುಲಾ: ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಪಾಲುದಾರಿಕೆ  ವ್ಯವಹಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಸಂಗಾತಿಗೆ ಅಚ್ಚರಿಯ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ.

ವೃಶ್ಚಿಕ: ಮೆಚ್ಚಿನ ವ್ಯಕ್ತಿಗಳನ್ನು ಬಹಳ ದಿನಗಳ ನಂತರ ಭೇಟಿ ಮಾಡಿದ ಸಂತೋಷ ನಿಮ್ಮದಾಗುವುದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ.

ಧನು: ಹಿರಿಯರ ಪುಣ್ಯ ಕ್ಷೇತ್ರಗಳ ಸಂದರ್ಶನ ಕನಸು ನನಸಾಗಲಿದೆ. ಬಂಡವಾಳ ಹೂಡಿಕೆ ಮಾಡಲು ಇದು ಸರಿಯಾದ ಸಮಯ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಳು ಕೂಡಿಬರಲಿದೆ. ತಾಳ್ಮೆ, ಸಂಯಮವಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments