ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 23 ಅಕ್ಟೋಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಂಗಾತಿಯ ಕೆಲವೊಂದು ನಿರ್ಧಾರಗಳು ನಿಮ್ಮ ಅಸಮಾಧಾನಕ್ಕೆ ಗುರಿಯಾದೀತು. ಹಾಗಿದ್ದರೂ ತಾಳ್ಮೆಯಿಂದ ಯೋಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಮಕ್ಕಳ ಸಾಧನೆ ಮನಸ್ಸಿಗೆ ಖುಷಿಕೊಡಲಿದೆ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಅಡ್ಡಹಾಕುವವರಿದ್ದೇ ಇರುತ್ತಾರೆ. ಎಲ್ಲವನ್ನೂ ಆತ್ಮವಿಶ್ವಾಸದಿಂದ ಎದುರಿಸಬೇಕು. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆ.

ಮಿಥುನ: ನೀವು ಬಯಸಿದ  ವಸ್ತು ನಿಮ್ಮ ಕೈ ಸೇರುವ ಸಮಯ ಸನ್ನಿಹಿತವಾಗಿದೆ. ಆಪ್ತರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗುವುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಲ್ಯಾಣ ಪ್ರಾಪ್ತಿಯಾಗಲಿದೆ. ಚಿಂತೆ ಬೇಡ.

ಕರ್ಕಟಕ: ನಿಮ್ಮ ಒಳ್ಳೆಯ ಯೋಚನೆಗಳಿಗೆ ತಕ್ಕ ಬೆಲೆ ಸಿಕ್ಕೇ ಸಿಗುತ್ತದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಿದ್ದರೂ ನಷ್ಟವಾಗದು. ಸಮಾನ ಮನಸ್ಕರೊಂದಿಗೆ ಬೆರೆಯಲಿದ್ದೀರಿ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಬಿಡುವು.

ಸಿಂಹ: ಎಷ್ಟೋ ದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳು ಅರ್ಧಕ್ಕೇ ನಿಲ್ಲಲಿವೆ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ಎದುರಾದೀತು. ತಾಳ್ಮೆಯಿರಲಿ.

ಕನ್ಯಾ: ನಿಮ್ಮ ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಮನೆಯಲ್ಲಿ ಏಕಾಂಗಿತನದ ಅನುಭವವಾದೀತು. ಸನ್ಮಿತ್ರರ ಸಹಾಯ ಪಡೆಯಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ದೂರವಾಗಲಿದೆ. ಹಿಂದೆ ಮಾಡಿದ್ದ ಹೂಡಿಕೆಗಳು ಕೈ ಹಿಡಿಯಲಿವೆ. ನೂತನ ದಂಪತಿಗಳು ಮೂರನೆಯವರ ಪ್ರವೇಶಕ್ಕೆ ಅವಕಾಶ ಕೊಡಬೇಡಿ.

ವೃಶ್ಚಿಕ: ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆಯಿಂದ ವಾಗ್ವಾದಗಳಾದೀತು. ಮಾತಿನ ಮೇಲೆ ನಿಗಾ ಇರಲಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ನಿಮ್ಮ ಆದಾಯ ಹೆಚ್ಚಿಸಲು ಸೂಕ್ತ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ನಿಮ್ಮ ಕೆಲವೊಂದು ಮಾತುಗಳು ಸಂಗಾತಿಯ ಅಸಮಾಧಾನಕ್ಕೆ ಕಾರಣವಾದೀತು. ಅನಗತ್ಯ ಸಂಘರ್ಷಕ್ಕೆ ಎಡೆಮಾಡಿಕೊಡದಿರಿ.

ಮಕರ: ಉದ್ಯೋಗದಲ್ಲಿ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಬರಲಿವೆ. ಸರಕಾರಿಕ ಕೆಲಸಗಳಲ್ಲಿ ಮುನ್ನಡೆ ಕಂಡುಬಂದೀತು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ವಿದ್ಯಾರ್ಥಿಗಳು ಕೆಟ್ಟ ಸ್ನೇಹ ಸಂಗದಿಂದ ದೂರವಿದ್ದರೆ ಉತ್ತಮ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಬಹುದಿನಗಳ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಸಾಂಸಾರಿಕ ತಾಪತ್ರಯಗಳಿಂದ ಮನಸ್ಸು ಹೈರಾಣಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಆದಾಯ ಕಂಡುಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments