Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 25 ಅಕ್ಟೋಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವ್ಯಾಪಾರಿಗಳು ವ್ಯವಹಾರ ನಿಮಿತ್ತ ಪರವೂರಿಗೆ ಪ್ರಯಾಣಿಸುವ ಸಂದರ್ಭಗಳು ಎದುರಾದೀತು. ಹೊಸ ಜನರ ಭೇಟಿ ನಿಮ್ಮ ಕಾರ್ಯ ಸಾಧನೆಗೆ ಅನುಕೂಲ ಮಾಡಿಕೊಡಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ವೃಷಭ: ಎಷ್ಟೇ ಎಚ್ಚರಿಕೆ ವಹಿಸಿದರೂ ವೈದ್ಯರ ಭೇಟಿಗೆ ಅಲೆದಾಟ ತಪ್ಪದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕುವುದು ಉತ್ತಮ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗುವುದು. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಪ್ರತಿಭೆಗೆ ತಕ್ಕ ಮನ್ನಣೆ ಸಿಗದೇ ಮನಸ್ಸಿಗೆ ಬೇಸರವೆನಿಸೀತು. ನಿಮ್ಮ ದುಃಖಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಕಠಿಣ ಸವಾಲುಗಳು ಎದುರಾದೀತು. ತಾಳ್ಮೆ, ಸಂಯಮ ಅಗತ್ಯ.

ಕರ್ಕಟಕ: ನಿಮ್ಮ ಮಾತಿಗಿಂತ ಕೃತಿಯ ಮೇಲೆ ಗಮನವಿರಲಿ. ಬೇರೆಯವರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ಸಮಸ್ಯೆಗೆ ಸಿಲುಕಿಕೊಳ್ಳದಿರಿ. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಅಪಘಾತದ ಭಯವಿದೆ. ಎಚ್ಚರವಿರಲಿ.

ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕತೆ ಎಲ್ಲರ ಗಮನ ಸೆಳೆಯಲಿದೆ. ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಆರ್ಥಿಕವಾಗಿ ಇದುವರೆಗೆ ಇದ್ದ ಕಷ್ಟಗಳು ದೂರವಾಗಲಿದೆ. ಅನಗತ್ಯ ಚಿಂತೆ ಬೇಡ.

ಕನ್ಯಾ: ಸಂಗಾತಿಯ ಮನಸ್ಸಿನ ಮಾತುಗಳಿಗೆ ಕಿವಿಯಾಗಲಿದ್ದೀರಿ. ಹೊಸದಾಗಿ ಆರಂಭಿಸಿರುವ ಯೋಜನೆಗಳು ಫಲ ಕೊಡಲಿವೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಿರಿಯರಿಗೆ ತೀರ್ಥ ಯಾತ್ರೆ ಮಾಡುವ ಯೋಗ.

ತುಲಾ: ಸಂದರ್ಭಕ್ಕೆ ತಕ್ಕಂತೆ ಯೋಚನೆ, ನಿರ್ಧಾರ ಮಾಡುವುದರಿಂದ ಸಂಭಾವ್ಯ ಅಪಾಯಗಳಿಂದ ದೂರವಾಗಬಹುದು. ಗೃಹೋಪಕರಣಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಯೋಗ್ಯ ವಯಸ್ಕರಿಗೆ ವಿವಾಹ ಪ್ರಾಪ್ತಿಯಾಗುವುದು.

ವೃಶ್ಚಿಕ: ಹೊಸ ಸಂಬಂಧಗಳು ನಿಮ್ಮಲ್ಲಿ ಹೊಸ ಉತ್ಸಾಹವನ್ನು ತರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ನೂತನವಾಗಿ ವೃತ್ತಿ ಜೀವನ ಆರಂಭಿಸಿದವರಿಗೆ ಯಶಸ್ಸು ಸಿಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಧನು: ಉದ್ಯೋಗ, ವ್ಯವಹಾರದಲ್ಲಿ ಎಲ್ಲರ ಸಹಕಾರದಿಂದ ಮೇಲುಗೈ ಸಾಧಿಸಲಿದ್ದೀರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಇಷ್ಟಮಿತ್ರರ ಭೇಟಿ ಮನಸ್ಸಿಗೆ ಖುಷಿ ಕೊಡಲಿದೆ.

ಮಕರ: ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನ ನಿಮ್ಮದಾಗಲಿದೆ. ಆದರೆ ಇಷ್ಟಾರ್ಥ ಸಿದ್ಧಿಗಾಗಿ ಕಠಿಣ ಪ್ರಯತ್ನ ಅಗತ್ಯ. ಕೌಟುಂಬಿಕವಾಗಿ ನೆಮ್ಮದಿ ಇರಲಿದ್ದು, ಇಷ್ಟಭೋಜನ ಮಾಡುವ ಯೋಗವಿದೆ. ಚಿಂತೆ ಬೇಡ.

ಮೀನ: ಸಾಂಸಾರಿಕವಾಗಿ ತೃಪ್ತಿದಾಯಕ ವಾತಾವರಣವಿರಲಿದೆ. ಯಾರೊಂದಿಗೂ ಅನಗತ್ಯ ಸಂಘರ್ಷ ಬೇಡ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಆಸ್ತಿ, ವಾಹನಾದಿ ಸೌಕರ್ಯಗಳು ಶೀಘ್ರದಲ್ಲೇ ನಿಮ್ಮದಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments