ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 28 ಅಕ್ಟೋಬರ್ 2021 (08:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲವೊಂದು ಅನಿರೀಕ್ಷಿತ ಕೆಲಸಗಳು ನಿಮ್ಮ ಪಾಲಿಗೆ ಬರಲಿವೆ. ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಆತಂಕ ಪಡುವ ಅಗತ್ಯವಿಲ್ಲ.

ವೃಷಭ: ಹೊಸದಾಗಿ ನೌಕರಿ ಆರಂಭಿಸಿರುವವರಿಗೆ ಸವಾಲುಗಳು ಸಹಜ. ತಾಳ್ಮೆ, ಸಂಯಮದಿಂದ ನಿಭಾಯಿಸಬೇಕಾಗುತ್ತದೆ. ಕಳೆದು ಹೋದ ವಸ್ತುವಿನ ಬಗ್ಗೆ ಚಿಂತೆ ನಡೆಸಿ ಪ್ರಯೋಜನವಿಲ್ಲ ಎಂಬುದನ್ನು ಅರಿಯುವಿರಿ.

ಮಿಥುನ: ನಿಮಗೆ ಇಂತಹದ್ದೇ ವಸ್ತು ಬೇಕೆನಿಸಿದರೂ ಅದು ಸಿಗದೇ ನಿರಾಸೆಪಡುವ ಸಂದರ್ಭ ಎದುರಾದೀತು. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಡಿಮೆಯಾಗಲಿದೆ. ಧನಾರ್ಜನೆಗೆ ನಾನಾ ಮಾರ್ಗ ಕಂಡುಕೊಳ್ಳಲಿದ್ದೀರಿ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಅನಗತ್ಯ ಸಂಶಯಗಳನ್ನಿಟ್ಟುಕೊಂಡು ತೊಂದರೆ ಮೈಮೇಲೆಳೆದುಕೊಳ್ಳಬೇಡಿ. ಆಪ್ತ ಮಿತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬಿಟ್ಟು ಇಷ್ಟದ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ವ್ಯವಸ್ಥಿತ ಯೋಜನೆಯಿದ್ದರೆ ನೀವು ಕೈಹಿಡಿದ ಕೆಲಸ ಯಶಸ್ವಿಯಾದೀತು. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ಸಂಗಾತಿಯ ದೇಹಾರೋಗ್ಯದ ಸಮಸ್ಯೆ ಪರಿಹಾರ ಸಿಕ್ಕಿ ನೆಮ್ಮದಿಯಾಗುವುದು. ಮಕ್ಕಳಿಂದ ಸಂತೋಷ ಸಿಗಲಿದೆ.

ತುಲಾ: ಪಾಲುದಾರಿಕೆ ವ್ಯವಹಾರಗಳಲ್ಲಿ ಅಡೆತಡೆಗಳು ಕಂಡುಬಂದೀತು. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ.

ವೃಶ್ಚಿಕ: ನಿಮ್ಮ ಇಷ್ಟ ವ್ಯಕ್ತಿಗಳ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆಯಿರಲಿದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕ ಲಾಭವಾದೀತು. ಖರ್ಚುವೆಚ್ಚಗಳ ಬಗ್ಗೆ ನಿಗಾ ಇರಲಿ.

ಧನು: ಬಾಕಿ ಇದ್ದ ಸಾಲ ಮರುಪಾವತಿ ಮಾಡಲಿದ್ದೀರಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಕರ: ಸಾಂಸಾರಿಕ ವಿಚಾರದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಮುನ್ನಡೆ ಕಂಡುಬರಲಿದೆ. ತಾಳ್ಮೆಯಿರಲಿ.

ಕುಂಭ: ಒಳ್ಳೆಯ ಅವಕಾಶಕ್ಕಾಗಿ ಕಾಯಲೇಬೇಕಾಗುತ್ತದೆ. ಸನ್ಮಿತ್ರರ ಸಂಗದಿಂದ ನಿಮ್ಮ ಭವಿಷ್ಯಕ್ಕೆ ಲಾಭವಾಗಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಸಂಕೋಚ ಪ್ರವೃತ್ತಿ ಬಿಟ್ಟು ನಿಮಗನಿಸಿದ್ದನ್ನು ನೇರವಾಗಿ ಹೇಳಿದರೆ ಉತ್ತಮ. ದಾಯಾದಿ ಕಲಹಗಳಿಗೆ ಹಿರಿಯರ ಮಧ‍್ಯಸ್ಥಿಕೆ ಪಡೆದುಕೊಳ್ಳಿ. ನೆಂಟರಿಷ್ಟರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ತಾಳ್ಮೆ, ಸಂಯಮ ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಮುಂದಿನ ಸುದ್ದಿ
Show comments