Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 16 ನವೆಂಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಆದರೆ ಮಾನಸಿಕವಾಗಿ ಹಲವು ಚಿಂತೆಗಳು ನಿಮ್ಮನ್ನು ಹೈರಾಣಾಗಿಸಲಿದೆ. ವ್ಯವಹಾರದಲ್ಲಿ ನಿರೀಕ್ಷಿತ ಫಲ ಕಂಡುಬರಲಿದೆ. ಮಕ್ಕಳ ಭವಿಷ್ಯದ ನಿಮಿತ್ತ ತೀರ್ಮಾನ ಕೈಗೊಳ್ಳಲಿದ್ದೀರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಆರ್ಥಿಕ ಅಡಚಣೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕಾರ್ಯನಿಮಿತ್ತ ದೂರ ಪ್ರಯಾಣ ಸಂಭವವಿದೆ. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ವ್ಯಾವಹಾರಿಕ ಕೆಲಸಗಳಿಗೆ ಪ್ರಭಾವಿ ವ್ಯಕ್ತಿಗಳ ಸಹಾಯ ಪಡೆಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ವೃತ್ತಿಸಂಬಂಧವಾದ ನಿಮ್ಮ ಸಮಸ್ಯೆಗಳನ್ನು ಕುಟುಂಬದವರ ಮೇಲೆ ತೋರಿಸಬೇಡಿ. ಸಂಗಾತಿಯೊಂದಿಗೆ ಸಂಯಮದಿಂದ ವರ್ತಿಸಿ. ಮಕ್ಕಳ ಸಂತೋಷಕ್ಕಾಗಿ ಕೆಲವು ನಿರ್ಧಾರ ಕೈಗೊಳ್ಳಲಿದ್ದೀರಿ.

ಸಿಂಹ: ಸಹೋದ್ಯೋಗಿಗಳು ನಿಮ್ಮ ಮೇಲೆ ಅವಲಂಬಿತರಾಗಿರುತ್ತಾರೆ. ಮಹಿಳೆಯರಿಗೆ ಸೋದರ ಸಮಾನರಿಂದ ಸಹಾಯವಾಗಲಿದೆ. ಗಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಕನ್ಯಾ: ಹಠಮಾರಿ ಧೋರಣೆ ಬಿಟ್ಟು ಕಾರ್ಯಸಾಧನೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗವಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ತುಲಾ: ವೃತ್ತಿರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸಬೇಕಾಗುತ್ತದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಎಚ್ಚರಿಕೆಯಿರಲಿ.

ವೃಶ್ಚಿಕ: ವ್ಯವಹಾರದಲ್ಲಿ ಹಿಂದೆ ಮಾಡಿದ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರಲಿದೆ.

ಧನು: ಹಲವು ದಿನಗಳ ನಂತರ ಬಂಧುಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಧಾರ್ಮಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರುವುದು. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರುವುದು. ಸಾಮಾಜಿಕವಾಗಿ ಜನಮನ್ನಣೆ ಗಳಿಸಲಿದ್ದೀರಿ.

ಮೀನ: ಮನೆಯವರ ಉತ್ತೇಜನದಿಂದ ಹೊಸ ಕೆಲಸಗಳನ್ನು ಮಾಡುವ ಉತ್ಸಾಹ ನಿಮ್ಮಲ್ಲಿ ಕಂಡುಬರುವುದು. ವೈವಾಹಿಕ ಸಂಬಂಧಗಳಲ್ಲಿ ತೊಂದರೆಯಾಗದಂತೆ ಕುಲದೇವರ ಪ್ರಾರ್ಥನೆ ಮಾಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

ಮುಂದಿನ ಸುದ್ದಿ
Show comments