Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 30 ನವೆಂಬರ್ 2021 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಕೆಲಸ ಕಾರ್ಯಗಳಲ್ಲಿ ಇತರರ ಮೇಲ್ವಿಚಾರಣೆ ನಿಮಗೆ ಹಿಡಿಸದೇ ಹೋಗಬಹುದು. ಬೇರೆಯವರ ಭಾವನೆಗಳಿಗೂ ಬೆಲೆಕೊಡಿ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ.

ವೃಷಭ: ಆರ್ಥಿಕವಾಗಿ ನಿಮ್ಮ ಸಂಕಷ್ಟಗಳು ದೂರವಾಗುವ ಕಾಲ ಬರಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲಿದ್ದೀರಿ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಕುಟುಂಬದ ಕ್ಷೇಮಕ್ಕಾಗಿ ಒಮ್ಮತದ ನಿರ್ಧಾರ ಮಾಡಲಿದ್ದೀರಿ.

ಮಿಥುನ: ಬರಬೇಕಾದ ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ಹೊಸ ಸಂಬಂಧಗಳನ್ನು ಉಳಿಸಿಕೊಳ್ಳುವ ಕಡೆಗೆ ಗಮನ ಕೊಡಲಿದ್ದೀರಿ. ನಿಮ್ಮ ಕೆಲಸ ಕಾರ್ಯಗಳಿಗೆ ಮಾತೃಸಮಾನರಿಂದ ಉತ್ತೇಜನ ಸಿಗಲಿದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಭೂಮಿ, ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ನಿರುದ್ಯೋಗಿಗಳಿಗೆ ವಿದೇಶದಲ್ಲಿ ಉದ್ಯೋಗವಾಶಕಗಳು ಕಂಡುಬರಲಿದೆ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ಹಿರಿಯರ ದಾನ ಧರ್ಮಾದಿ ಕೆಲಸಗಳಲ್ಲಿ ಕೈ ಜೋಡಿಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಕನ್ಯಾ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿಲ್ಲ. ದೂರ ಪ್ರಯಾಣದಿಂದ ಕಾರ್ಯಸಾಧನೆಯಾಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಾಗಲಿದೆ. ತಾಳ್ಮೆ ಕಳೆದುಕೊಳ್ಳಬೇಡಿ.

ತುಲಾ: ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನಿಮ್ಮ ವಿಚಾರಗಳನ್ನು ಇತರರ ಮೇಲೆ ಹೇರಲು ಹೋಗಬೇಡಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಕಿರು ಓಡಾಟ ನಡೆಸಬೇಕಾಗಬಹುದು.

ವೃಶ್ಚಿಕ: ನಿಮಗೆ ಇಷ್ಟವಿಲ್ಲದೇ ಹೋದರೂ ಕೆಲವೊಂದು ಕೆಲಸ ಮಾಡಬೇಕಾದ ಅನಿವಾರ್ಯತೆ ಎದುರಾದೀತು. ದಾಂಪತ್ಯದಲ್ಲಿ ಅನುರಾಗ ಮೂಡಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬಂದೀತು.

ಧನು: ಇನ್ನೊಬ್ಬರ ಮೇಲೆ ಅತಿಯಾದ ಅವಲಂಬನೆಯೂ ಒಳ್ಳೆಯದಲ್ಲ. ನಂಬಿದವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ಹಿರಿಯರ ಮಾತುಗಳು ಕಿರಿ ಕಿರಿಯೆನಿಸೀತು. ದೇಹಾರೋಗ್ಯದಲ್ಲಿ ಸುಧಾರಣೆಯಾಗುವುದು.

ಮಕರ: ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಎಚ್ಚರಿಕೆಯಿಂದಿರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಗೌರವ ಸಿಗಲಿದೆ. ಮನಸ್ಸಿನಲ್ಲಿರುವ ವಿಚಾರಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಲಿದ್ದೀರಿ.

ಕುಂಭ: ಇನ್ನೊಬ್ಬರಿಗೆ ನೋವುಂಟು ಮಾಡಿದ ಬಗ್ಗೆ ಪಶ್ಚಾತ್ತಾಪವಾದೀತು. ಸಂಬಂಧಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕಾಗುತ್ತದೆ. ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ಖರ್ಚುವೆಚ್ಚಗಳಾದೀತು.

ಮೀನ: ನಿಮ್ಮ ಗೌರವಕ್ಕೆ ಧ‍್ಯುತಿ ಬಾರದಂತೆ ವರ್ತನೆಯಿರಲಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ನೆರೆಹೊರೆಯವರು ನಿಮ್ಮ ಕಷ್ಟಕ್ಕೆ ಆಗಿಬರಲಿದ್ದಾರೆ. ಧನಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ