Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 2 ಡಿಸೆಂಬರ್ 2021 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ನಿಮ್ಮ ಮನಸ್ಸಿನ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದನ್ನು ಬಿಡಿ. ಆರ್ಥಿಕವಾಗಿ ಬರಬೇಕಾಗಿದ್ದ ಹಣ ವಾಪಸಾಗಲಿದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಗೆ ನೆರವಾಗಲು ಮುಂದಾಗಲಿದ್ದೀರಿ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಪ್ರೀತಿ ಪಾತ್ರರ ಮನಸ್ಸಿನ ದುಃಖಕ್ಕೆ ಸಾಂತ್ವನ ಹೇಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ವಂಚನೆಗೊಳಗಾಗುವ ಭೀತಿಯಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದಿನದಂತ್ಯಕ್ಕೆ ನೆಮ್ಮದಿ ಸಿಗಲಿದೆ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಸಣ್ಣ ಪುಟ್ಟ ಬದಲಾವಣೆಗಳಾಗಲಿವೆ. ಗುರುಹಿರಿಯರ ಮಾರ್ಗದರ್ಶನ ಕಷ್ಟಕಾಲದಲ್ಲಿ ನೆರವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಿವೇಕ ಕಳೆದುಕೊಳ್ಳದೇ ತಾಳ್ಮೆಯಿಂದ ಯೋಚನೆ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ನೂತನ ದಂಪತಿಗಳಿಗೆ ಹೊಂದಾಣಿಕೆ ಕೊರತೆಯಾಗಲಿದೆ.

ಕನ್ಯಾ: ಒಂದನ್ನು ಪಡೆಯುವುದಕ್ಕೆ ಇನ್ನೊಂದನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಲಿದೆ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ತುಲಾ: ಪಾಲುದಾರಿಕೆ ವ್ಯವಹಾರಗಳಿಂದ ಮುನ್ನಡೆ ಕಂಡುಬರಲಿದೆ. ವ್ಯಕ್ತಿಗತ ವಿಚಾರಗಳಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಒಳಿತಾಗಲಿದೆ.

ವೃಶ್ಚಿಕ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ವಿಘ್ನಗಳು ಎದುರಾದೀತು. ಹಿರಿಯರಿಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಎದುರಾದೀತು. ಕಾಳಜಿಯಿರಲಿ.

ಧನು: ಮಾನಸಿಕವಾಗಿ ಕಾಡುತ್ತಿರುವ ಚಿಂತೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಅನಿರೀಕ್ಷಿತವಾಗಿ ಧನಾಮನವಾಗಲಿದೆ. ಹೊಸದಾಗಿ ಕೆಲಸಕ್ಕೆ ಸೇರಿಕೊಂಡವರಿಗೆ ಉನ್ನತಿಗೇರುವ ಅವಕಾಶ. ತಾಳ್ಮೆ, ಸಂಯಮ ಅಗತ್ಯ.

ಮಕರ: ಶೈಕ್ಷಣಿಕ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರುವುದು. ಸಹೋದರರ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ.

ಕುಂಭ: ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಲಿವೆ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ಸರಕಾರಿ ನೌಕರರಿಗೆ ಕೆಲಸದೊತ್ತಡ ಕಂಡುಬಂದೀತು. ಕೃಷಿಕರಿಗೆ ಲಾಭ-ನಷ್ಟ ಸಮನಾಗಿರಲಿದೆ.

ಮೀನ: ವೈಯಕ್ತಿಕ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದ್ದು, ಹೊಸ ಉಲ್ಲಾಸ ಮೂಡಲಿದೆ. ಹಿಂದೆ ನೀವು ಮಾಡಿದ ಒಳ್ಳೆಯ ಕೆಲಸಗಳು ಇಂದು ಸಕಾಲದಲ್ಲಿ ನೆರವಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವುದರ ಲಾಭಗಳು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಮುಂದಿನ ಸುದ್ದಿ
Show comments