Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 4 ಡಿಸೆಂಬರ್ 2021 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೌಟುಂಬಿಕವಾಗಿ ಘರ್ಷಣೆಗೆ ಅವಕಾಶ ಮಾಡಿಕೊಡಬೇಡಿ. ಮಾತಿನ ಮೇಲೆ ನಿಗಾ ಇರಲಿ. ಹಳೆಯ ಕಹಿ ನೆನಪುಗಳನ್ನು ಮರೆತು ಹೊಸ ಜೀವನಕ್ಕೆ ಕಾಲಿಡುವ ಅನಿವಾರ್ಯತೆಯಿರುತ್ತದೆ. ತಾಳ್ಮೆಯಿರಲಿ.

ವೃಷಭ: ಇಂದು ನೀವು ಬಯಸಿದ ವಸ್ತು ಕೈಗೆ ಸಿಗಲಿದ್ದು, ಸಂತೋಷದಾಯಕ ದಿನವಾಗಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಹಂತಕ್ಕೇರುವ ಯೋಗ ಕೂಡಿಬರುವುದು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಖರೀದಿ ವ್ಯವಹಾರದಲ್ಲಿ ವಂಚನೆಗೊಳಗಾಗುವ ಅಪಾಯವಿದೆ. ಸರಿಯಾಗಿ ಪರಾಮರ್ಶಿಸಿ ಮುನ್ನಡೆಯಿರಿ. ಸೂಕ್ತ ಸಮಯದಲ್ಲಿ ಧನಾಗಮನವಾಗುವುದರಿಂದ ಕಷ್ಟದಿಂದ ಪಾರಾಗಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಯಾವುದೇ ವ್ಯವಹಾರಕ್ಕೆ ಮುನ್ನ ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯುವುದು ಉತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಯಶಸ್ಸು ಕಂಡುಬರುವುದು. ಧಾರ್ಮಿಕ ಕ್ಷೇತ್ರ ಸಂದರ್ಶನ, ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಸಿಂಹ: ಹಿರಿಯರ ಮನಸ್ಸಿನ ಭಾವನೆಗಳನ್ನು ಅರಿತು ಮುನ್ನಡೆಯಬೇಕಿದೆ. ಹೊಸ ವಿಚಾರಗಳಿಗೆ ನಿಮ್ಮ ಮನಸ್ಸು ತೆರೆದಿರಲಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕನ್ಯಾ: ಆಪ್ತರೊಂದಿಗೆ ನಿಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳುವುದರಿಂದ ದುಃಖ ಕಡಿಮೆಯಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸಾಮಾಜಿಕವಾಗಿ ನಿಮ್ಮ ಗೌರವ, ಸ್ಥಾನಮಾನಾದಿಗಳು ಹೆಚ್ಚಲಿವೆ.

ತುಲಾ: ಮೂರನೆಯವರು ನಿಮ್ಮ ವೈಯಕ್ತಕ ವಿಚಾರದಲ್ಲಿ ತಲೆತೂರಿಸುವುದರಿಂದ ಕಿರಿ ಕಿರಿಯಾದೀತು. ಕಷ್ಟಗಳನ್ನು ಒಳಗೇ ನುಂಗಿಕೊಳ್ಳುವ ಪರಿಸ್ಥಿತಿ ಎದುರಾಗಲಿದೆ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಬೆಲೆ ಸಿಗಲಿದೆ.

ವೃಶ್ಚಿಕ: ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸುವುದು ಮುಖ್ಯ. ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ.

ಧನು: ಕೈಗೊಂಡ ಕಾರ್ಯದಲ್ಲಿ ಸಫಲತೆ ಸಿಗಬೇಕಾದರೆ ತಾಳ್ಮೆ ಅಗತ್ಯ. ನಿಮ್ಮ ಕೆಲವೊಂದು ನಿರ್ಧಾರಗಳು ಸಂಗಾತಿಯ ಅಸಮಾಧಾನಕ್ಕೆ ಗುರಿಯಾದೀತು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗವೇ ಲೇಸು ಎನಿಸಲಿದೆ.

ಮಕರ: ಮಕ್ಕಳ ಜೀವನದಲ್ಲಾಗುವ ಅಭಿವೃದ್ಧಿ ಕಂಡು ಸಂತೋಷವಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳ ಬಗ್ಗೆ ಆಸಕ್ತಿ ಮೂಡಲಿದೆ. ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರುವುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಇಂದು ನೀವು ಅಂದುಕೊಂಡ ಕೆಲಸಗಳು ತಾನಾಗಿಯೇ ನೆರವೇರಲಿದೆ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿಯ ಯೋಗ ಕೂಡಿಬರಲಿದೆ. ಕೌಟುಂಬಿಕವಾಗಿ ನೆಂಟರಿಷ್ಟರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚವಾಗಲಿದೆ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಅತೀ ಉದಾರತೆಯಿಂದ ತೊಂದರೆಗೊಳಗಾಗಲಿದ್ದೀರಿ. ಎಚ್ಚರಿಕೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನೆಯ ಮುಂಭಾಗದಲ್ಲಿ ಈ ಕೆಲವು ಗಿಡಗಳಿದ್ದರೆ ದರಿದ್ರ ತಪ್ಪಿದ್ದಲ್ಲ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ದೇವಿ ಚಂದ್ರಘಂಟಾ ಮಂತ್ರ ಓದುವುದರಿಂದ ನಿಮಗೆ ಈ ಫಲಗಳು ಸಿಗುತ್ತವೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿ ದೇವನ ಈ ಮಂತ್ರಗಳನ್ನು ಪಠಿಸಿದರೆ ಶನಿ ದೋಷ ನಿವಾರಣೆಯಾಗುವುದು

ಮುಂದಿನ ಸುದ್ದಿ
Show comments