Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 9 ಡಿಸೆಂಬರ್ 2021 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ತಾಳ್ಮೆಯ ಸತ್ವ ಪರೀಕ್ಷೆ ನಡೆಯಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ.

ವೃಷಭ: ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ವೃತ್ತಿರಂಗದಲ್ಲಿ ಅಡೆತಡೆಗಳು ನಿವಾರಣೆಯಾಗಲಿದ್ದು, ಮೇಲ್ದರ್ಜೆಗೇರುವ ಅವಕಾಶಗಳು ನಿಮ್ಮದಾಗುವುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಕರ್ಕಟಕ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲು ಮುಂದಾಗಲಿದ್ದೀರಿ. ಮಹಿಳೆಯರಿಗೆ ಅಡುಗೆ ಮನೆಯಲ್ಲಿ ಅನಿರೀಕ್ಷಿತ ಅಪಘಾತಗಳ ಅಪಾಯವಿದೆ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ತಾಳ್ಮೆಯಿರಲಿ.

ಸಿಂಹ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡಿದ್ದರೆ ಸವಾಲುಗಳು ಸಾಮಾನ್ಯ. ಯಾವುದೇ ಕಾರಣಕ್ಕೂ ಮಾತಿನ ಮೇಲೆ ಹಿಡಿತ ಕಳೆದುಕೊಳ್ಳಬೇಡಿ. ನಾಲಿಗೆ ಚಪಲದಿಂದ ಉದರ ಸಂಬಂಧೀ ಅನಾರೋಗ್ಯ ಕಾಡೀತು. ಎಚ್ಚರಿಕೆಯಿರಲಿ.

ಕನ್ಯಾ: ನಿಮ್ಮ ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣಿಸುವ ಸಂಭವವಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇಹಾರೊಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ದೈವಾನುಕೂಲದಿಂದ ಇಂದು ವ್ಯಾಪಾರಿಗಳಿಗೆ ಲಾಭಕರ ದಿನವಾಗಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದಾರೆ. ವೈವಾಹಿಕ ಸಂಬಂಧಗಳನ್ನು ಸೂಕ್ಷ್ಮವಾಗಿ ನಿಭಾಯಿಸಿ. ತಾಳ್ಮೆ ಅಗತ್ಯ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಲಿದ್ದೀರಿ. ನೀರಿನೊಂದಿಗೆ ಎಚ್ಚರಿಕೆಯಿಂದಿರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಕೌಟುಂಬಿಕವಾಗಿ ನೆಮ್ಮದಿಯರಲಿದೆ.

ಧನು: ವ್ಯಾವಹಾರಿಕವಾಗಿ ಸಂಬಂಧ ವೃದ್ಧಿಗೆ ಮುಂದಾಗಲಿದ್ದೀರಿ. ವೈಯಕ್ತಿಕ ಜೀವನದ ಕಷ್ಟ-ನಷ್ಟಗಳಿಗೆ ಸಂಗಾತಿಯ ಸಾಥ್ ಸಿಗುವುದು. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮಕರ: ಎಷ್ಟೋ ದಿನದಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಲಿದ್ದೀರಿ. ಚಿಂತೆ ಬೇಡ.

ಕುಂಭ: ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದೀತು, ಆತಂಕ ಬೇಡ. ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ವ್ಯಾಪಾರಿ ವರ್ಗದವರಿಗೆ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮೀನ: ಹೊಸದಾಗಿ ಮದುವೆಯಾಗಿದ್ದರೆ ನಿಮ್ಮ ಸಂಬಂಧವನ್ನು ಗಟ್ಟಿಗೊಳಿಸಲು ಪ್ರಯತ್ನ ನಡೆಸುವುದು ಉತ್ತಮ. ವಿದ್ಯಾರ್ಥಿ ವರ್ಗದವರಿಗೆ ಕಠಿಣ ಪರಿಶ್ರಮ ಅಗತ್ಯ. ಸರಕಾರಿ ಉದ್ಯೋಗಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ