Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 9 ಡಿಸೆಂಬರ್ 2021 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ತಾಳ್ಮೆಯ ಸತ್ವ ಪರೀಕ್ಷೆ ನಡೆಯಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ.

ವೃಷಭ: ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ವೃತ್ತಿರಂಗದಲ್ಲಿ ಅಡೆತಡೆಗಳು ನಿವಾರಣೆಯಾಗಲಿದ್ದು, ಮೇಲ್ದರ್ಜೆಗೇರುವ ಅವಕಾಶಗಳು ನಿಮ್ಮದಾಗುವುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಕರ್ಕಟಕ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲು ಮುಂದಾಗಲಿದ್ದೀರಿ. ಮಹಿಳೆಯರಿಗೆ ಅಡುಗೆ ಮನೆಯಲ್ಲಿ ಅನಿರೀಕ್ಷಿತ ಅಪಘಾತಗಳ ಅಪಾಯವಿದೆ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ತಾಳ್ಮೆಯಿರಲಿ.

ಸಿಂಹ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡಿದ್ದರೆ ಸವಾಲುಗಳು ಸಾಮಾನ್ಯ. ಯಾವುದೇ ಕಾರಣಕ್ಕೂ ಮಾತಿನ ಮೇಲೆ ಹಿಡಿತ ಕಳೆದುಕೊಳ್ಳಬೇಡಿ. ನಾಲಿಗೆ ಚಪಲದಿಂದ ಉದರ ಸಂಬಂಧೀ ಅನಾರೋಗ್ಯ ಕಾಡೀತು. ಎಚ್ಚರಿಕೆಯಿರಲಿ.

ಕನ್ಯಾ: ನಿಮ್ಮ ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣಿಸುವ ಸಂಭವವಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇಹಾರೊಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ದೈವಾನುಕೂಲದಿಂದ ಇಂದು ವ್ಯಾಪಾರಿಗಳಿಗೆ ಲಾಭಕರ ದಿನವಾಗಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದಾರೆ. ವೈವಾಹಿಕ ಸಂಬಂಧಗಳನ್ನು ಸೂಕ್ಷ್ಮವಾಗಿ ನಿಭಾಯಿಸಿ. ತಾಳ್ಮೆ ಅಗತ್ಯ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಲಿದ್ದೀರಿ. ನೀರಿನೊಂದಿಗೆ ಎಚ್ಚರಿಕೆಯಿಂದಿರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಕೌಟುಂಬಿಕವಾಗಿ ನೆಮ್ಮದಿಯರಲಿದೆ.

ಧನು: ವ್ಯಾವಹಾರಿಕವಾಗಿ ಸಂಬಂಧ ವೃದ್ಧಿಗೆ ಮುಂದಾಗಲಿದ್ದೀರಿ. ವೈಯಕ್ತಿಕ ಜೀವನದ ಕಷ್ಟ-ನಷ್ಟಗಳಿಗೆ ಸಂಗಾತಿಯ ಸಾಥ್ ಸಿಗುವುದು. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮಕರ: ಎಷ್ಟೋ ದಿನದಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಲಿದ್ದೀರಿ. ಚಿಂತೆ ಬೇಡ.

ಕುಂಭ: ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದೀತು, ಆತಂಕ ಬೇಡ. ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ವ್ಯಾಪಾರಿ ವರ್ಗದವರಿಗೆ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮೀನ: ಹೊಸದಾಗಿ ಮದುವೆಯಾಗಿದ್ದರೆ ನಿಮ್ಮ ಸಂಬಂಧವನ್ನು ಗಟ್ಟಿಗೊಳಿಸಲು ಪ್ರಯತ್ನ ನಡೆಸುವುದು ಉತ್ತಮ. ವಿದ್ಯಾರ್ಥಿ ವರ್ಗದವರಿಗೆ ಕಠಿಣ ಪರಿಶ್ರಮ ಅಗತ್ಯ. ಸರಕಾರಿ ಉದ್ಯೋಗಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments