ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 14 ಡಿಸೆಂಬರ್ 2021 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಳೆಯ ಮಿತ್ರರ ಸಮಾಗಮವಾಗಲಿದೆ. ಆಹಾರೋದ್ಯಮಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕಕರಿಂದ ಮೆಚ್ಚುಗೆ ಸಿಗುವುದು. ಬಾಕಿ ಹಣ ವಸೂಲಾತಿ ಚಿಂತೆ ಕಾಡೀತು. ಆದರೆ ಭರವಸೆ ಕಳೆದುಕೊಳ್ಳಬೇಡಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಹಾಯ ಒದಗಿಬರಲಿದೆ. ಸಹೋದರರೊಂದಿಗಿನ ಅಸಮಾಧಾನಗಳು ದೂರವಾಗಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಪ್ರಾರ್ಥನೆ ಮಾಡುವುದು ಉತ್ತಮ. ತಾಳ್ಮೆ, ಸಂಯಮವಿರಲಿ.

ಮಿಥುನ: ನೂತನ ಕೆಲಸದಲ್ಲಿ ತೊಡಗಿಸಿಕೊಳ್ಳುವ ಮೊದಲು ಶನಿದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ. ಕಾರ್ಯರಂಗದಲ್ಲಿದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಕಾರ್ನಿಯಮಿತ್ತ ಕಿರು ಸಂಚಾರ ಮಾಡುವಿರಿ.

ಕರ್ಕಟಕ:  ವೈಚಾರಿಕವಾಗಿ ಯೋಚನೆ ಮಾಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗಲಿದೆ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ಕನ್ಯಾ: ಹಳೆಯ ತಪ್ಪುಗಳನ್ನು ತಿದ್ದಿ ಯಶಸ್ಸು ಕಾಣಲಿದ್ದೀರಿ. ಮಕ್ಕಳಿಂದ ಸಂತೋಷ ಸಿಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಉತ್ತಮ ಧನಾರ್ಜನೆಗೆ ಅವಕಾಶಗಳು ಸಿಗಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ತುಲಾ: ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಲಾಭ ಕಂಡುಬರುವುದು. ನಿಮ್ಮ ಕೆಲಸಗಳಿಗೆ ಕುಟುಂಬದವರ ಪ್ರೋತ್ಸಾಹ ಸಿಗಲಿದೆ. ಚಿಂತೆ ಬೇಡ.

ವೃಶ್ಚಿಕ: ಬಹುದಿನಗಳಿಂದ ಕಾಯುತ್ತಿದ್ದ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ ಕೂಡಿಬರುವುದು. ಕಾರ್ಯನಿಮಿತ್ತ ಅನ್ಯ ಊರಿಗೆ ಪ್ರಯಾಣ ಮಾಡಲಿದ್ದೀರಿ. ವಾಹನ ಖರೀದಿ ಯೋಜನೆಗಳನ್ನು ಕೆಲವು ದಿನ ಮುಂದೂಡುವುದು ಉತ್ತಮ.

ಧನು: ಹೊಸ ಕೆಲಸಗಳಿಗೆ ಕೈ ಹಾಕಿದಾಗ ವಿಘ್ನಗಳು ಸಾಮಾನ್ಯ. ಕಾರ್ಯರಂಗದಲ್ಲಿ ಸಹೋದ್ಯೋಗಿಗಳ ನೆರವಿಗೆ ಧಾವಿಸಲಿದ್ದೀರಿ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದು, ನಿಮ್ಮ ಕೆಲಸಗಳು ಸರಾಗವಾಗಿ ನಡೆಯಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬಂದೀತು. ಸ್ವಯಂ ವ್ಯಾಪಾರಿಗಳು ಹಿತಶತ್ರುಗಳಿಂದ ದೂರವಿರುವುದು ಉತ್ತಮ.

ಕುಂಭ: ಹಿಂದೆ ಮಾಡಿದ್ದ ಹೂಡಿಕೆ ತಕ್ಕ ಫಲ ಪಡೆಯಲಿದ್ದೀರಿ. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಉನ್ನತಿಯ ಯೋಗ. ಯೋಗ್ಯ  ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆತ್ಮವಿಶ್ವಾಸವಿರಲಿ.

ಮೀನ: ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕುಟುಂಬದವರ ಜೊತೆ ಚರ್ಚಿಸಿ ಮುನ್ನಡೆಯಿರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾದೀತು. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments