Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 19 ಡಿಸೆಂಬರ್ 2021 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಾಂಸಾರಿಕವಾಗಿ ಕೆಲವೊಂದು ವಿಚಾರಗಳನ್ನು ಯಾರೊಂದಿಗೂ ಹೇಳಿಕೊಳ್ಳಲಾಗದ ಸಂದಿಗ್ಧತೆ ಎದುರಾಗಲಿದೆ. ವಿಭಿನ್ನ ರೀತಿಯಲ್ಲಿ ಯೋಚನೆ ಮಾಡಬೇಕಾಗುತ್ತದೆ. ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮವಹಿಸಬೇಕಾಗುತ್ತದೆ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಸ್ಥಾನ ಮಾನ ಸುಧಾರಣೆಗೆ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ‍್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸ ಮಾಡಲಿದ್ದೀರಿ.

ಮಿಥುನ: ಸಾಂಸಾರಿಕವಾಗಿ ಬರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಅಲಕ್ಷ್ಯ ಮಾಡಬೇಡಿ. ಮಕ್ಕಳ ದೇಹಾರೋಗ್ಯದ ಕಡೆಗೆ ಗಮನಹರಿಸಬೇಕಾಗುತ್ತದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.

ಕರ್ಕಟಕ: ಹೆಚ್ಚಿನ ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಾಹನಾದಿ ಸೌಕರ್ಯಗಳು ಶೀಘ್ರದಲ್ಲೇ ನಿಮ್ಮದಾಗಲಿದೆ. ಇಷ್ಟ ಮಿತ್ರರ ಭೇಟಿ ಯೋಗವಿದೆ. ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ ಸಾಧ‍್ಯತೆ.

ಸಿಂಹ: ಸಂದರ್ಭೋಚಿತ ಸಲಹೆಗಳು ನಿಮ್ಮನ್ನು ಅಪಾಯದಿಂದ ಪಾರು ಮಾಡಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಹಳ ದಿನಗಳ ನಂತರ ಮಿತ್ರರ ಭೇಟಿ ಮಾಡಿದ ಸಂತೋಷ ಸಿಗುವುದು.

ಕನ್ಯಾ: ಕೆಲವೊಂದು ವಿಚಾರಗಳನ್ನು ಆಪ್ತರೊಂದಿಗೆ ಹೇಳಿಕೊಳ್ಳಲು ಹೆಣಗಾಡುತ್ತೀರಿ. ಮಾನಸಿಕ ನೆಮ್ಮದಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಪಡೆಯಲಿದ್ದೀರಿ. ತಾಳ್ಮೆಯಿರಲಿ.

ತುಲಾ: ಸಾಂದರ್ಭಿಕವಾಗಿ ಯೋಚಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಕುಟುಂಬ ಸದಸ್ಯರೊಂದಿಗೆ ಕಿರು ಸಂಚಾರ ಮನಸ್ಸಿನ ಉಲ್ಲಾಸ ಹೆಚ್ಚಿಸಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಬಂದೀತು. ಎಚ್ಚರಿಕೆಯಿರಲಿ.

ವೃಶ್ಚಿಕ: ವ್ಯಾಪಾರೀ ವರ್ಗದವರಿಗೆ ಲಾಭ ಗಳಿಸುವ ಅವಕಾಶವಿದೆ. ಅತಿಯಾಗಿ ಹೊಗಳುವವರಿಂದ ದೂರವಿದ್ದರೇ ಉತ್ತಮ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಧನು: ಕಾರ್ಯರಂಗದಲ್ಲಿ ಸ್ಪರ್ಧಾತ್ಮಕ ಮನೋಭಾವ ಕಂಡುಬಂದೀತು. ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಮಕ್ಕಳ ಜೀವನದ ಬಗ್ಗೆ ಅನಗತ್ಯ ಚಿಂತೆ ಬೇಡ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ ಕಂಡುಬರಲಿದೆ.

ಮಕರ: ವಿದ್ಯಾರ್ಥಿಗಳಿಗೆ ಅಧ್ಯಯನ  ನಿಮಿತ್ತ ದೂರ ಸಂಚಾರ ಮಾಡುವ ಸಂದರ್ಭಗಳು ಎದುರಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಲೆಕ್ಕ ಪತ್ರಗಳನ್ನು ಜೋಪಾನವಾಗಿಡಿ.

ಕುಂಭ: ಉತ್ತಮ ಆರೋಗ್ಯ ನಿಮ್ಮದಾಗಲಿದ್ದು, ಸ್ವ ಪರಿಶ್ರಮದಿಂದ ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಸಹೋದರರಾದಿ ಸಂಬಂಧಗಳು ಸುಧಾರಣೆಯಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಮೀನ: ವರಮಾನ ಹೆಚ್ಚಲಿದ್ದು, ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಹೆಜ್ಜೆಯಿಡಲಿದ್ದೀರಿ. ನಿಮ್ಮ ವ್ಯವಹಾರ ಕುಶಲತೆಯಿಂದ ಏಳಿಗೆ ಕಂಡುಬರಲಿದೆ. ನೆಂಟರಿಷ್ಟರ ಭೇಟಿಯಾಗಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments