Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 20 ಡಿಸೆಂಬರ್ 2021 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗ ಕೂಡಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಅತಿಯಾದ ಚಿಂತೆ ಬೇಡ.

ವೃಷಭ: ಇನ್ನೊಬ್ಬರ ಅತಿಯಾದ ಕಾಳಜಿ ಕಿರಿ ಕಿರಿ ಉಂಟು ಮಾಡಬಹುದು. ತಾಳ್ಮೆ, ಸಂಯಮ ಅಗತ್ಯ. ವೃತ್ತಿರಂಗದಲ್ಲಿ ಸಜ್ಜನರ ಸಹವಾಸ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕ್ರಯ ವಿಕ್ರಯ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗ ಮಾಡಲಿದ್ದೀರಿ. ಮಹಿಳೆಯರಿಗೆ ಪ್ರೀತಿ ಪಾತ್ರರ ಭೇಟಿ ಯೋಗ.

ಕರ್ಕಟಕ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಚೇತರಿಕೆ ಇದ್ದರೂ ಹಿತಶತ್ರುಗಳ ಕಾಟ ಕಂಡುಬಂದೀತು. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿ.

ಸಿಂಹ: ಬಂಧು ಮಿತ್ರರಿಂದ ನಿಮ್ಮ ಕೆಲಸಗಳಿಗೆ ಪ್ರೋತ್ಸಾಹ ಕಂಡುಬರಲಿದೆ. ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗಲಿದೆ. ಬೇರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ವಾಹನಾದಿ ಸೌಕರ್ಯಗಳು ಶೀಘ್ರದಲ್ಲೇ ನಿಮ್ಮದಾಗಲಿದೆ.

ಕನ್ಯಾ: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟು ದಿನ ಮುಚ್ಚಿಟ್ಟಿದ್ದ ಗುಟ್ಟುಗಳು ಹೊರಬೀಳಲಿವೆ. ಹಣಕಾಸಿನ ವಿಚಾರದಲ್ಲಿ ಹೊಸ ಸಾಹಸ ಮಾಡಲು ಹೋಗಬೇಡಿ.

ತುಲಾ: ದೂರ ಪ್ರಯಾಣದಿಂದ ಕಾರ್ಯಸಾಧನೆ ಜೊತೆಗೆ ಸಂತೋಷವೂ ಸಿಗಲಿದೆ. ಸಹೋದರರಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸುವುದು ಉತ್ತಮ. ಆರೋಗ್ಯದಲ್ಲಿ ಸುಧಾರಣೆ.

ವೃಶ್ಚಿಕ: ವೈಯಕ್ತಿಕ ವೈಷಮ್ಯ ಮರೆತು ಕುಟುಂಬದ ಹಿತದೃಷ್ಟಿಯಿಂದ ಸಂಬಂಧ ವೃದ್ಧಿಸುವ ಕಡೆಗೆ ಗಮನ ಕೊಡಬೇಕಾಗುತ್ತದೆ. ಮನೆಗೆ ಬಂಧು ಮಿತ್ರರ ಭೇಟಿಯಾಗಲಿದ್ದು, ಸಂತೋಷದಿಂದ ಕಾಲಕಳೆಯುವಿರಿ.

ಧನು: ಬರಬೇಕಾದ ಸಂಪತ್ತು ವಾಪಸ್ ಪಡೆಯಲು ಪ್ರಯತ್ನ ನಡೆಸಲಿದ್ದೀರಿ. ಸಂಗಾತಿಯ ಸಹಕಾರ ನಿಮ್ಮ ಜೊತೆಗಿರಲಿದೆ. ಯಂತ್ರೋಪಕರಣ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನ ನಿಮ್ಮದಾಗಬೇಕಾದರೆ ಮೇಲಧಿಕಾರಿಗಳನ್ನು ಸಂತೃಪ್ತಿಪಡಿಸಬೇಕಾಗುತ್ತದೆ. ಹಿಂದೆ ಮುಂದೆ ಅರಿಯದೇ ಹೊಸ ಕೆಲಸಕ್ಕೆ ಕೈ ಹಾಕಬೇಡಿ. ತಾಳ್ಮೆಯಿರಲಿ.

ಕುಂಭ: ನಿಮ್ಮ ಕಾರ್ಯಚಟುವಟಿಕೆ ಮೇಲೆ ಇತರರ ನಿಗಾ ಇರಲಿದೆ. ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮೀನ: ಆತುರದಲ್ಲಿ ಕೈಗೊಳ್ಳುವ ನಿರ್ಧಾರಗಳಿಂದ ತೊಂದರೆಗೀಡಾಗುವ ಸಾಧ್ಯತೆಗಳು ಹೆಚ್ಚು. ಭೂಮಿ, ವಾಹನಾದಿ ಖರೀದಿ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಸ್ವಯಂ ಉದ್ಯೋಗಿಗಳಿಗೆ ನಿರೀಕ್ಷಿತ ಲಾಭ ಕಂಡುಬರಲಿದೆ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಮುಂದಿನ ಸುದ್ದಿ