Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 21 ಡಿಸೆಂಬರ್ 2021 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಂಗಾತಿಯ ಮಾತುಗಳು ಈಗ ಅಪಥ್ಯವೆನಿಸಿದರೂ ಭವಿಷ್ಯದ ದೃಷ್ಟಿಯಿಂದ ಸರಿಯಾಗಿರಲಿದೆ. ಸಾಂಸಾರಿಕವಾಗಿ ಕೆಲವೊಂದು ಸೂಕ್ಷ್ಮಗಳನ್ನು ಅರಿತು ನಡೆಯಬೇಕು. ಆರ್ಥಿಕವಾಗಿ ಸಬಲರಾಗುವ ಯೋಜನೆ ರೂಪಿಸಲಿದ್ದೀರಿ.

ವೃಷಭ: ಸಹೋದರ ವರ್ಗದವರ ನಿರ್ಧಾರಗಳು ನಿಮ್ಮ ಅಸಮಾಧಾನಕ್ಕೆ ಗುರಿಯಾದೀತು. ಆದರೆ ತಾಳ್ಮೆ, ಸಂಯಮದಿಂದ ಯೋಚಿಸಬೇಕು. ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಅಪರಿಚಿತರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ.

ಮಿಥುನ: ಬಹುದಿನಗಳ ಕನಸು ನನಸು ಮಾಡಲು ಮುಂದಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ನಿಮ್ಮ ಕ್ರಿಯಾಶೀಲತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಚಿಂತೆ ಬೇಡ.

ಕರ್ಕಟಕ: ವ್ಯಾವಹಾರಿಕ ಸಂಬಂಧ ವೃದ್ಧಿಗೆ ಮುಂದಾಗಲಿದ್ದೀರಿ. ಅವಿವಾಹಿತರಿಗೆ ವಿವಾಹ ಯೋಗಕ್ಕೆ ಕೆಲವು ದಿನ ಕಾಯುವುದು ಉತ್ತಮ. ಹಿರಿಯರಿಗೆ ಪುಣ್ಯ ಕ್ಷೇತ್ರಗಳಿಗೆ ಸಂದರ್ಶನ ಮಾಡುವ ಯೋಗವಿದೆ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಚಿಂತೆ ಬೇಡ. ಕಾರ್ಯಕ್ಷೇತ್ರದಲ್ಲಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಇನ್ನೊಬ್ಬರಿಗೆ ಸಹಾಯ ಮಾಡುವ ಅವಕಾಶ ನಿಮ್ಮದಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಸಂದರ್ಭೋಚಿತವಾಗಿ ನಿರ್ಧಾರ ತೆಗೆದುಕೊಳ್ಳುವುದರಿಂದ ಯಶಸ್ಸು ನಿಮ್ಮದಾಗಲಿದೆ. ಅವಕಾಶಗಳು ಬಂದಾಗ ಸರಿಯಾಗಿ ಬಳಸಿಕೊಳ್ಳಿ. ಶೈಕ್ಷಣಿಕ ರಂಗದಲ್ಲಿರುವವರಿಗೆ ಕಠಿಣ ಪರೀಕ್ಷೆಗಳು ಎದುರಾಗಲಿವೆ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕ ಚೇತರಿಕೆಗೆ ದಾರಿ ಕಂಡುಬರಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಮಾಡಬೇಡಿ.

ವೃಶ್ಚಿಕ: ಇನ್ನೊಬ್ಬರ ಕೆಲಸಗಳಲ್ಲಿ ಸಹಾಯ ಮಾಡುವ ಗುಣ ಎಲ್ಲರಿಗೂ ಮೆಚ್ಚುಗೆಯಾಗಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು, ಸಂತೋಷವಿರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಧನು: ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ನಿಮ್ಮ ಅಭಿಪ್ರಾಯಗಳನ್ನು ಬೇರೆಯವರ ಮೇಲೆ ಹೇರಲು ಹೋಗಬೇಡಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮಕರ: ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ಆರ್ಥಿಕವಾಗಿ, ವ್ಯಾವಹಾರಿಕವಾಗಿ ಚೇತರಿಕೆಯ ದಿನಗಳಿವು. ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಕುಂಭ: ಮಾನಸಿಕವಾಗಿ ಖುಷಿಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಯಿರಲಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿಯ ಯೋಗವಿದೆ.

ಮೀನ: ಕೈಗೆ ಬಂದಿದ್ದು ಬಾಯಿಗೆ ಬರದ ಸ್ಥಿತಿ ಎದುರಾದೀತು. ತಾಳ್ಮೆ, ಸಂಯಮವಿರಲಿ. ಬಂಧುವರ್ಗದವರ ಚಾಡಿಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಾಂಸಾರಿಕವಾಗಿ ಮಧ್ಯಮ ಸುಖವಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ