ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 3 ಜನವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಸಂರ್ಭೋಚಿತ ನಿರ್ಧಾರದಿಂದ ಸಂಭಾವ್ಯ ಸಮಸ್ಯೆಗಳಿಂದ ದೂರವಾಗಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಎಷ್ಟೇ ಕೆಲಸ ಮಾಡಿದರೂ ಅದಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ತಾಳ್ಮೆ, ಸಂಯಮ ಅಗತ್ಯ.

ವೃಷಭ: ನಿರುದ್ಯೋಗಿಗಳಿಗೆ ನಿಮ್ಮ ಜಾಣ್ಮೆ, ಬುದ್ಧಿವಂತಿಕೆಗೆ ತಕ್ಕ ಕೆಲಸ ಸಿಗಲಿದೆ. ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ವಿದ್ಯಾರ್ಥಿಗಳಿಗೆ ಅಧ್ಯಯನ ನಿಮಿತ್ತ ಪರವೂರಿಗೆ ಸಂಚರಿಸಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಚಿಂತೆ ಬೇಡ.

ಕರ್ಕಟಕ: ಕೆಲಸದ ನಿಮಿತ್ತ ಅನ್ಯವೂರಿಗೆ ಪ್ರಯಾಣ ಬೆಳೆಸಲಿದ್ದು, ಅಪರಿಚಿತರಿಂದ ಸಹಾಯ ಒದಗಿಬರುವುದು. ಶುಭ ವಾರ್ತೆ, ಶುಭ ವಿಚಾರಗಳನ್ನು ಆಲಿಸುವ ಯೋಗವಿದೆ. ಮಾನಸಿಕವಾಗಿ ಉಲ್ಲಾಸದಾಯಕ ದಿನವಾಗಲಿದೆ.

ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಶೀಘ್ರವೇ ಚಾಲನೆ ನೀಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಹಿಂದೆ ನಡೆದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ತಾಳ್ಮೆಯಿರಲಿ.

ಕನ್ಯಾ: ನಿಮ್ಮ ಬಹುದಿನಗಳ ಕನಸು ಈಡೇರುವ ದಿನವಿದಾಗಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿರುವವರಿಗೆ ಹೊಸ ದಾರಿಗಳು ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವು ಉತ್ತಮವಾಗಿರಲಿದೆ. ಚಿಂತೆ ಬೇಡ.

ತುಲಾ: ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಆತ್ಮೀಯರೊಂದಿಗೆ ನಿಮ್ಮ ಮನದಾಳದ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ನಿಮ್ಮ ಸ್ವಂತ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ.

ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ಜವಾಬ್ಧಾರಿಯುತ ನಡೆಯಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಅಧ್ಯಾಪನ ವೃತ್ತಿಯಲ್ಲಿರುವವರಿಗೆ ಮುನ್ನಡೆ ಕಂಡುಬರುವುದು. ವ್ಯಾಪಾರೀ ವರ್ಗದವರಿಗೆ ವ್ಯವಹಾರದಲ್ಲಿ ಚೇತರಿಕೆಯಿರಲಿದೆ.

ಧನು: ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದ್ದು, ದೈವಿಕ ಕೆಲಸಗಳಿಗೆ ಸಾಥ್ ಕೊಡಲಿದ್ದೀರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾದೀತು.

ಮಕರ: ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿ ಬಾರದು. ಯೋಗ್ಯ ವಯಸ್ಕರು ಸೂಕ್ತ ವೈವಾಹಿಕ ಸಂಬಂಧಕ್ಕೆ ಕೆಲವು ದಿನ ಕಾಯುವುದು ಉತ್ತಮ. ತಾಳ್ಮೆಯಿರಲಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ.

ಮೀನ: ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗಳು ದೂರವಾಗಲಿದೆ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಾಥ್ ಸಿಗುವುದು. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗಲಿದ್ದು, ಧನವ್ಯಯವಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments