ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 13 ಜನವರಿ 2022 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು.

ವೃಷಭ: ಬೇಡದ ವಿಚಾರಗಳ ಅನಗತ್ಯ ತಲೆಕೆಡಿಸಿಕೊಂಡು ತಾಳ್ಮೆ ಕಳೆದುಕೊಳ್ಳುವ ಘಟನೆಗಳು ನಡೆದೀತು. ಮಹಿಳೆಯರಿಗೆ ಅಡುಗೆ ಮನೆಯಲ್ಲಿ ಸಣ್ಣಪುಟ್ಟ ತೊಂದರೆಗಳಾದೀತು. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ.

ಮಿಥುನ: ನೂತನ ಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತೋಷವಾಗುವುದು. ವ್ಯವಹಾರಗಳಲ್ಲಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಬಂಧು ಬಳಗದವರ ಪ್ರೋತ್ಸಾಹಕ ನುಡಿ ಉತ್ಸಾಹ ಹೆಚ್ಚಿಸಲಿದೆ.

ಕರ್ಕಟಕ: ವ್ಯಾಪಾರ, ವ್ಯವಹಾರ ಮಾಡುವಾಗ ವಿಘ್ನ ಭಯ ಕಂಡುಬಂದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿದೆ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಾಗಲಿದೆ. ಕಲಾ ಕ್ಷೇತ್ರದಲ್ಲಿರುವವರಿಗೆ ಹೆಸರು ಮಾಡಲು ಅವಕಾಶ ಒದಗಿಬರುವುದು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಮಿತ್ರರ ಭೇಟಿ ಮನಸ್ಸಿಗೆ ಖುಷಿ ಕೊಡಲಿದೆ.

ಕನ್ಯಾ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷಗಳಾದೀತು. ಆರ್ಥಿಕವಾಗಿ ಹೆಚ್ಚಿನ ಹೊರೆ ಹೊರುವ ಸಂದರ್ಭಗಳು ಎದುರಾದೀತು. ಆದರೆ ಹಿರಿಯರ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿದೆ.

ತುಲಾ: ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿದಾಯಕ ವಾತಾವರಣವಿರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಮನಸ್ಸಿಗೆ ಆಸೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ತಕ್ಕ ಉದ್ಯೋಗಾವಕಾಶಗಳು ಸಿಗಲಿದೆ. ಧನಾರ್ಜನೆಗೆ ತೊಂದರೆಯಾಗದು. ಆದರೆ ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿ ಬಾರದು.

ಧನು: ವೃತ್ತಿರಂಗದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಬೆಲೆ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ಪ್ರೀತಿ ಪಾತ್ರರನ್ನು ಭೇಟಿಯಾದ ಸಂತೋಷ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಜವಾಬ್ಧಾರಿಯಿಂದಾಗಿ ದೇಹಾಯಾಸವೂ ಅಧಿಕವಾಗಲಿದೆ. ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ತಾಳ್ಮೆಯಿರಲಿ.

ಕುಂಭ: ಕೆಳಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗಲಿದೆ. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಮೀನ: ಅಂದುಕೊಂಡ ಕೆಲಸ ಪೂರ್ತಿ ಮಾಡಿದ ಸಂತೋಷ, ನೆಮ್ಮದಿ ನಿಮ್ಮದಾಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದಾಂಪತ್ಯದಲ್ಲಿ ಅನಗತ್ಯ ಚರ್ಚೆಗೆ ಅವಕಾಶ ಕೊಡಬೇಡಿ. ತಾಳ್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments