ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 14 ಫೆಬ್ರವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮನಶ್ಶಾಂತಿಗಾಗಿ ಹುಡುಕಾಡುವಂತಹ ಪರಿಸ್ಥಿತಿ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಮಾತಿನ ಮೇಲೆ ಸಂಯಮವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಮನಸ್ಸು ಹಾತೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ವೃತ್ತಿರಂಗದಲ್ಲಿ ಅನುಕೂಲಕರ ವಾತಾವರಣ ಕಂಡುಬರಲಿದೆ. ಸಹೋದ್ಯೋಗಿಗಳ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಮಿಥುನ: ದೇವತಾನುಗ್ರಹದಿಂದ ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ನೂತನ-ಬಂಧು ಮಿತ್ರರ ಸಮಾಗಮವಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ಸಂಗಾತಿಗೆ ಅಚ್ಚರಿಯ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಶ್ರಮದಾಯಕ ಕೆಲಸಗಳಿಂದ ದೇಹಾಯಾಸವಾದೀತು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ವಿದ್ಯಾರ್ಜನೆಯಲ್ಲಿ ತಲ್ಲೀನತೆ ಕಂಡುಬರಲಿದ್ದು, ಹೊಸ ವಿಚಾರಗಳಿಗೆ ಮನಸ್ಸು ತೆರೆದುಕೊಳ್ಳಲಿದೆ. ಆರ್ಥಿಕವಾಗಿ ಧನಾದಾಯ ಹೆಚ್ಚಲಿದ್ದು, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಕನ್ಯಾ: ಸ್ವಯಂ ವೃತ್ತಿಯವರಿಗೆ ಲಾಭಕರ ದಿನವಾಗಿರಲಿದೆ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ ಕಂಡುಬರುವುದು. ವಿಶೇಷವಾದ ಉಡುಗೊರೆ ಪಡೆಯಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವ ಯೋಗ.

ತುಲಾ: ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಪ್ರಯತ್ನಿಸಲಿದ್ದಾರೆ. ಸಾಂಸಾರಿಕವಾಗಿ ಹೆಚ್ಚಿನ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು. ಅಧಿಕ ಧನ ಲಾಭ ತರುವ ಯೋಜನೆಗಳ ಬಗ್ಗೆ ಕಾರ್ಯಪ್ರವೃತ್ತರಾಗಲಿದ್ದೀರಿ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

ಧನು: ವ್ಯಾವಹಾರಿಕವಾಗಿ ಮುನ್ನಡೆ ಕಂಡುಬರುವುದು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ.

ಮಕರ: ನೀರು-ಅಗ್ನಿಯೊಂದಿಗೆ ಸೆಣಸಾಟ ಸಲ್ಲದು. ಮಹಿಳೆಯರಿಗೆ ಅಡುಗೆ ಮನೆ ಕೆಲಸಗಳು ಖುಷಿ ನೀಡಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಗೆ ಅವಕಾಶ.

ಕುಂಭ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಕೆಲಸ ಕಾರ್ಯದಲ್ಲಿ ಸಂಗಾತಿಯ ಸಹಕಾರ ಕಂಡುಬರಲಿದೆ. ಮಕ್ಕಳ ವಿಚಾರದಲ್ಲಿ ಚಿಂತೆಯಾದೀತು.

ಮೀನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಕಡೆಗೆ ಚಿಂತನೆ ನಡೆಸಲಿದ್ದಾರೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments