Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 17 ಫೆಬ್ರವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ವ್ಯವಹಾರದಲ್ಲಿ ಮುನ್ನಡೆ ಕಂಡುಬಂದರೂ ಅಂದುಕೊಂಡಷ್ಟು ಹಣ ಗಳಿಕೆಯಾಗದೇ ನಿರಾಸೆಯಾದೀತು. ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಜಯ ಸಿಗುವುದು. ಕೌಟುಂಬಿಕವಾಗಿ ತಾಳ್ಮೆ, ಸಂಯಮ ಅಗತ್ಯ.

ವೃಷಭ: ಬಂಧು ಮಿತ್ರರ ಪ್ರೋತ್ಸಾಹದಿಂದ ಅಂದುಕೊಂಡ ಕೆಲಸ ಪೂರ್ತಿ ಮಾಡಲಿದ್ದೀರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ. ಸಾಮಾಜಿಕವಾಗಿ ಜನಮನ್ನಣೆ ಪಡೆಯಲಿದ್ದೀರಿ. ಗುರುಹಿರಿಯರ ಸಲಹೆಗಳನ್ನು ಪಾಲಿಸಿ.

ಮಿಥುನ: ಆಸ್ತಿ ವಿಚಾರದಲ್ಲಿ ಸರ್ಕಾರಿ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿ ಮುನ್ನಡೆಯುವುದು ಉತ್ತಮ. ಧನಾರ್ಜನೆಗೆ ನಾನಾ ದಾರಿಗಳು ಕಂಡುಬರಲಿದೆ. ಮೆಚ್ಚಿನ ವ್ಯಕ್ತಿಗಳೊಂದಿಗೆ ಮನಬಿಚ್ಚಿ ಮಾತನಾಡಲಿದ್ದೀರಿ.

ಕರ್ಕಟಕ: ತಾಳ್ಮೆಯಿದ್ದರೆ ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ಪೂರ್ತಿಯಾದೀತು. ತಾಯಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಮಕ್ಕಳಿಂದ ಸಂತೋಷದ ವಾರ್ತೆ ಆಲಿಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ಸಂಶೋಧಕ ವೃತ್ತಿಯವರಿಗೆ ಮುನ್ನಡೆ. ವ್ಯಾಪಾರಿಗಳಿಗೆ ಧನಾರ್ಜನೆಗೆ ತೊಂದರೆಯಾಗದು. ಹಿತಶತ್ರುಗಳಿಂದ ದೂರವಿದ್ದರೆ ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.

ಕನ್ಯಾ: ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ವೃತ್ತಿರಂಗದಲ್ಲಿ ನಿಮ್ಮ ಮನಸ್ಸಿನ ಬಯಕೆ ಈಡೇರಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ.

ತುಲಾ: ನೀವು ಮಾಡುವ ಕೆಲಸಗಳು ಸಾಮಾಜಿಕವಾಗಿ ಜನಮನ್ನಣೆ ಪಡೆಯಲಿದೆ. ಕಳೆದು ಹೋದ ಸಂಬಂಧ ಮರಳಿ ಬೆಸೆಯಲಿದೆ. ಮಹಿಳೆಯರು ಚಿನ್ನಾಭರಣಗಳನ್ನು ಜೋಪಾನ ಮಾಡಿಕೊಳ್ಳಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಸ‍್ಥಾನ ಮಾನ ನಿಮ್ಮದಾಗಲಿದೆ. ಹೊಸದಾಗಿ ವೃತ್ತಿ ಜೀವನ ಆರಂಬಿಸಿದವರಿಗೆ ಅಡೆತಡೆಗಳು ಎದುರಾದೀತು. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಸಂತೋಷವಿರಲಿದೆ.

ಧನು: ಇನ್ನೊಬ್ಬರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂದು ಅತಿಯಾಗಿ ಯೋಚಿಸುವುದು ನಿಮ್ಮ ಮನಸ್ಸಿನ ನೆಮ್ಮದಿ ಹಾಳುಮಾಡೀತು. ಸಂಗಾತಿಯ ಕೆಲಸಗಳಿಗೆ ಸಾಥ್ ಕೊಡಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಸಂಶಯಕ್ಕೆ ಎಡೆಮಾಡಿಕೊಡದಿರಿ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗ ಪಡೆಯುವ ಕನಸು ನನಸಾದೀತು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ವಿಶೇಷವಾದ ವ್ಯಕ್ತಿಗಳಿಂದ ನಿಮ್ಮ ಜೀವನದಲ್ಲಿ ಸಂತೋಷ ಸಿಗಲಿದೆ. ದಾಯಾದಿ ಕಲಹಗಳಿಗೆ ಅಂತ್ಯ ಹಾಡಲಿದ್ದೀರಿ. ಉದ್ಯೋಗ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ನೆರೆಹೊರೆಯವರೊಂದಿಗೆ ಅನಗತ್ಯ ವಾದ ವಿವಾದ ಬೇಡ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಮಾಡಿಕೊಳ್ಳಲಿದ್ದೀರಿ. ಪ್ರೀತಿ ಪಾತ್ರರಿಂದ ವಿಶೇಷ ಸಂದೇಶ ಪಡೆಯಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments