ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 22 ಫೆಬ್ರವರಿ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಜೀವನದಲ್ಲಿ ಹೊಸ ಆರಂಭಕ್ಕೆ ಮುನ್ನುಡಿ ಬರೆಯಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸಂಗಾತಿಯೊಂದಿಗೆ ಪರಾಮರ್ಶಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ಕಂಡುಬರಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ.

ಕರ್ಕಟಕ: ಹೊಸ ವಸ್ತು ಖರೀದಿಸುವ ನಿಮ್ಮ ಕನಸು ನನಸಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಂಡುಬಂದೀತು. ಕೃಷಿಕರಿಗೆ ಬೆಳೆಗೆ ತಕ್ಕ ಬೆಲೆ ಸಿಗಲಿದೆ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗ. ನಿಮ್ಮ ಹಠವಾದೀ ಮನೋಭಾವ ಇತರರಿಗೆ ಕಿರಿ ಕಿರಿ ಎನಿಸೀತು. ಕಾರ್ಯ ಸಿದ್ಧಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಬಹುದಿನಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಇಷ್ಟ ಮಿತ್ರರ ಭೇಟಿ, ಭೋಜನ ಯೋಗವಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಉತ್ತಮ ಯೋಚನೆಗಳಿಂದ ಸುತ್ತಲಿದ್ದವರಿಗೂ ಸಕಾರಾತ್ಮಕ ಭಾವನೆ ಮೂಡಿಸಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ಮಾನಸಿಕವಾಗಿ ನೆಮ್ಮದಿಯಾಗಲಿದೆ.

ವೃಶ್ಚಿಕ: ಸುಲಭವಾಗಿ ಸಿಕ್ಕಿದ ವಸ್ತು ಅಷ್ಟೇ ಸುಲಭವಾಗಿ ಕಳೆದುಹೋಗಲಿದೆ. ಸಂಬಂಧಗಳಲ್ಲಿ ಒಡಕಾಗದಂತೆ ನೋಡಿಕೊಳ್ಳಿ. ಮಾತಿನ ಮೇಲೆ ಸಂಯಮವಿರಲಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ತಾಳ್ಮೆ ಅಗತ್ಯ.

ಧನು: ಎಷ್ಟೋ ದಿನದಿಂದ ಅಂದುಕೊಂಡ ಕೆಲಸಗಳು ಇಂದು ಪೂರ್ತಿ ಮಾಡಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದೇವರ ಪ್ರಾರ್ಥನೆ ಮಾಡಿದರೆ ಶುಭ.

ಮಕರ: ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡಬೇಡಿ. ಸಂದರ್ಭಕ್ಕೆ ತಕ್ಕ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯಗಳು ದೂರವಾಗಲಿದೆ.

ಕುಂಭ: ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಇಷ್ಟಮಿತ್ರರ ಭೇಟಿ ಯೋಗವಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮನದಾಸೆ ಈಡೇರಲಿದೆ. ಆರ್ಥಿಕವಾಗಿ ಸುಧಾರಣೆ ಕಂಡುಬರಲಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ. ಸಂತೋಷವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಮುಂದಿನ ಸುದ್ದಿ
Show comments