ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 26 ಫೆಬ್ರವರಿ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಾಹನ, ಭೂಮಿ ಖರೀದಿ ವಿಚಾರದಲ್ಲಿ ಆಸಕ್ತಿ ಕಂಡುಬರಲಿದೆ. ಉದ್ಯೋಗ ವಿಚಾರದಲ್ಲಿ ಅಜಾಗ್ರತೆಯಿಂದ ಅನಾಹುತಗಳಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಹಳೆಯ ವೈಷಮ್ಯಗಳನ್ನು ಮರೆತು ಹೊಸ ಜೀವನ ಎದುರಿಸಲು ಸಿದ್ಧರಾಗಿ. ಮಹಿಳೆಯರಿಗೆ ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚಾಗಲಿವೆ. ಹಿರಿಯರಿಗೆ ದೇವತಾ ಕಾರ್ಯ ನೆರವೇರಿಸುವ ಯೋಗ ಕೂಡಿಬರಲಿದೆ.

ಮಿಥುನ: ವೃತ್ತಿರಂಗದಲ್ಲಿ ಗುರುಹಿರಿಯರ ಮಾರ್ಗದರ್ಶನದಿಂದ ಅಭಿವೃದ್ಧಿ ಕಂಡುಬರಲಿದೆ. ಸರಕಾರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ತಾಳ್ಮೆಯಿರಲಿ.

ಕರ್ಕಟಕ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನದಲ್ಲಿ ಅಭಿವೃದ್ಧಿ ಕಂಡುಬರಲಿದೆ. ವೃತ್ತಿರಂಗದಲ್ಲಿ ನಿಮ್ಮ ಜವಾಬ್ಧಾರಿಯುತ ಕಾರ್ಯಗಳಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಹೊಸದಾಗಿ ವೃತ್ತಿ ಜೀವನ ಆರಂಭಿಸಿದ್ದವರಿಗೆ ಹೊಸ ಸವಾಲುಗಳು ಎದುರಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ ಉಂಟಾಗಲಿದೆ.

ಕನ್ಯಾ: ಅತಿಯಾದ ಕಾರ್ಯದೊತ್ತಡ ಎದುರಾದೀತು. ಅನಿವಾರ್ಯವಾಗಿ ದೂರ ಸಂಚಾರ ಮಾಡಲಿದ್ದೀರಿ. ಹಾಗಿದ್ದರೂ ಕಾರ್ಯಸಾಧನೆಯಾದ ಖುಷಿ ಸಿಗಲಿದೆ. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು. ಚಿಂತೆ ಬೇಡ.

ತುಲಾ: ದೈಹಿಕವಾಗಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದರೂ ಮಾನಸಿಕವಾಗಿ ಗಟ್ಟಿಯಾಗಿರಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಹಿರಿಯರೊಂದಿಗೆ ಸಂಘರ್ಷಕ್ಕಿಳಿಯಬೇಡಿ. ಮಾತಿನ ಮೇಲೆ ಸಂಯಮವಿರಲಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿಯಾಗುವ ಯೋಗ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯಕ್ಕೊಳಗಾಗಬೇಡಿ.

ಧನು: ಉದ್ಯೋಗ ವ್ಯವಹಾರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ನಿಮ್ಮ ದೃಢ ನಿರ್ಧಾರದಿಂದ ಕಾರ್ಯಸಾಧನೆಯಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಸ್ಥಿತಿಯಿರಲಿದೆ. ಚಿಂತೆ ಬೇಡ.

ಮಕರ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣ ಹಾಕವುದು ಉತ್ತಮ.

ಕುಂಭ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಲಾಭ ಕಂಡುಬರುವುದು. ಸರಕಾರಿ ಕಾಗದ ಪತ್ರಗಳ ಬಗ್ಗೆ ನಿಗಾ ವಹಿಸಿ. ನೆರೆಹೊರೆಯವರ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮೀನ: ಅನಿರೀಕ್ಷಿತವಾಗಿ ಧನ ಲಾಭವಾಗಲಿದ್ದು, ಅಂದುಕೊಂಡಿದ್ದ ಕೆಲಸಗಳನ್ನು ನೆರವೇರಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಮುಂದಿನ ಸುದ್ದಿ
Show comments