ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 27 ಫೆಬ್ರವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಳೆಯ ಸಮಸ್ಯೆಗಳು ಮತ್ತೆ ಪ್ರತ್ಯಕ್ಷವಾಗಲಿದ್ದು, ಮನಸ್ಸಿಗೆ ಕಿರಿ ಕಿರಿಯಾಗಲಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಿದೆ. ಇಷ್ಟಭೋಜನ ಮಾಡುವ ಯೋಗ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ.

ವೃಷಭ: ವ್ಯಾಪಾರೀ ವರ್ಗದವರಿಗೆ ಅಡೆತಡೆಗಳಿದ್ದರೂ ಆರ್ಥಿಕವಾಗಿ ಲಾಭವಾಗಲಿದೆ. ಸಕಾಲದಲ್ಲಿ ಹಣಕಾಸಿನ ನೆರವು ಹರಿದುಬರುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಯನ್ನು ಯಾರಿಂದಲೂ ತಡೆಯಲು ಸಾಧ‍್ಯವಿಲ್ಲ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮನಸ್ಸಿನ ಆಸೆ, ಆಕಾಂಕ್ಷೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ.

ಕರ್ಕಟಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಪ್ರೀತಿಪಾತ್ರಗಳ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಬಂಧುಬಳಗದವರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದಾಂಪತ್ಯದಲ್ಲಿ ಸಂತೋಷವಿರಲಿದೆ. ಇಷ್ಟ ಮಿತ್ರರ ಭೇಟಿ ಯೋಗ ನಿಮ್ಮದಾಗಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಚಿಂತೆ ಅಗತ್ಯ.

ಕನ್ಯಾ: ವ್ಯಾಪಾರ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ-ನಷ್ಟ ಸಮನಾಗಿರಲಿದೆ. ದೂರದ ಬಂಧು ಮಿತ್ರರ ಭೇಟಿಯಾಗುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಾಳದೀತು. ಭೂಮ್ಯಾದಿ ಆಸ್ತಿ ಖರೀದಿ ವಿಚಾರದಲ್ಲಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ.

ವೃಶ್ಚಿಕ: ಸಾಂಸಾರಿಕ ಸುಖಕ್ಕೆ ಯಾವುದೇ ಅಡ್ಡಿಯಾಗದು. ಆದರೆ ನೆರೆಹೊರೆಯವರೊಂದಿಗೆ ಸಂಘರ್ಷಗಳಾಗುವ ಸಾಧ‍್ಯತೆ. ಎಚ್ಚರಿಕೆಯಿಂದಿರಬೇಕು. ನೀವು ಇಂದು ಕೈಗೊಳ್ಳುವ ನಿರ್ಧಾರಗಳು ಮುಂದಿನ ಜೀವನಕ್ಕೆ ಪೂರಕವಾಗಲಿದೆ.

ಧನು: ದಾಂಪತ್ಯದಲ್ಲಿ ಪರಸ್ಪರ ಸಹಕಾರದಿಂದ ಕೌಟುಂಬಿಕವಾಗಿ ನೆಮ್ಮದಿ ಕಂಡುಬರುವುದು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಆಸಕ್ತಿ ಮೂಡಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮಕರ: ಬಹಳ ದಿನಗಳ ನಂತರ ಆಪ್ತೇಷ್ಟರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಮಧ್ಯಮ ಸುಖ. ಮಾತಿನ ಮೇಲೆ ನಿಗಾ ಇರಲಿ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಚಿಂತೆ ಬೇಡ.

ಕುಂಭ: ಅತೀವ ಸಂತೋಷವಾಗುವಂತಹ ವಾರ್ತೆಗಳು ಇಂದು ಕೇಳಿಬರಲಿದೆ. ಕೌಟುಂಬಿಕವಾಗಿ ಸಂತೋಷದಾಯಕ ದಿನಗಳು. ನೀವು ಅಂದುಕೊಂಡಂತೆಯೇ ಕೆಲಸಗಳು ನೆರವೇರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಮಹಿಳೆಯರಿಗೆ ಚಿನ್ನಾಭರಣಗಳನ್ನು ಖರೀದಿಸುವ ಯೋಗ. ನೀವು ಬಹಳ ಇಷ್ಟಪಡುತ್ತಿದ್ದ ವಸ್ತು ಇಂದು ನಿಮ್ಮ ಕೈಸೇರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಸತತ ಪ್ರಯತ್ನ ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments