Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 9 ಮಾರ್ಚ್ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಯಾವುದೇ ವಿಚಾರವಾದರೂ ಸುಲಭವಾಗಿ ಒಪ್ಪಿಕೊಳ್ಳುವ ಪ್ರವೃತ್ತಿ ನಿಮ್ಮದಲ್ಲ. ಹೀಗಾಗಿ ಬೇರೆಯವರಿಗೆ ಇದರಿಂದ ಅಸಮಾಧಾನಗಳುಂಟಾಗಬಹುದು. ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ತಾಳ್ಮೆ ಅಗತ್ಯ.

ವೃಷಭ: ಸಂಗಾತಿಯ ಕೆಲವೊಂದು ಮಾತುಗಳು ನಿಮಗೆ ಅಪಥ್ಯವೆನಿಸೀತು. ಆದರೆ ಭವಿಷ್ಯದ ದೃಷ್ಟಿಯಿಂದ ಹೊಂದಾಣಿಕೆ ಅಗತ್ಯ. ಉದ್ಯೋಗದಲ್ಲಿ ಬದಲಾವಣೆಯಾಗುವ ಸಂಭವ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಮನೆಯಲ್ಲಿ ಕೆಲವೊಂದು ಮಹತ್ವದ ಬದಲಾವಣೆಯಾಗಲಿದೆ. ಸಾಂಸಾರಿಕವಾಗಿ ತಾಳ್ಮೆ, ಹೊಂದಾಣಿಕೆಯಿರಲಿ. ವೃತ್ತಿರಂಗದಲ್ಲಿ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ.

ಕರ್ಕಟಕ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಇಷ್ಟಭೋಜನ ಪ್ರಾಪ್ತಿಯಾಗುವುದು.

ಸಿಂಹ: ರಾಜಕೀಯವಾಗಿ ನಿಮ್ಮ ಏಳಿಗೆ ಸಹಿಸದವರು ಪಿತೂರಿ ನಡೆಸಿಯಾರು. ಯಾವುದೇ ವಿಚಾರವಾದರೂ ಸರಿಯಾಗಿ ಪರಾಮರ್ಶಿಸಿ ಮುನ್ನಡೆಯುವುದು ಉತ್ತಮ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಕನ್ಯಾ: ಇಷ್ಟು ದಿನ ನೀವು ಕಾಯುತ್ತಿದ್ದ ಅವಕಾಶ ಇಂದು ಒದಗಿಬರಲಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ತುಲಾ: ನಿಮ್ಮ ಆಶಾವಾದಿ ಮನೋಭಾವವೇ ನಿಮಗೆ ಶ್ರೀರಕ್ಷೆಯಾಗಲಿದೆ. ವಿಪರೀತ ಕೆಲಸದೊತ್ತಡದಿಂದ ತಾಳ್ಮೆ ಕಳೆದುಕೊಳ್ಳುವ ಸಂಧರ್ಭಗಳು ಎದುರಾದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿರಲಿ.

ವೃಶ್ಚಿಕ: ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವ ಪ್ರಸಂಗಗಳು ಎದುರಾದೀತು. ಎಚ್ಚರಿಕೆ ಅಗತ್ಯ. ಕಟ್ಟಡ ಕಾಮಗಾರಿ ಕೆಲಸಕ್ಕೆ ಕೈ ಹಾಕಿದ್ದರೆ ಅಡೆತಡೆಗಳು ಬಂದೀತು. ದೇವತಾ ಪ್ರಾರ್ಥನೆ ಮಾಡಿ.

ಧನು: ಕೋರ್ಟು ಕಚೇರಿ ಕೆಲಸಗಳಿಗಾಗಿ ಸಿದ್ಧತೆ ನಡೆಸಲಿದ್ದೀರಿ. ಗುರುಹಿರಿಯರ ಸಲಹೆ ಸೂಚನೆಗಳು ಉಪಯೋಗಕ್ಕೆ ಬರಲಿವೆ. ಕೌಟುಂಬಿಕವಾಗಿ ಪರಸ್ಪರ ಚರ್ಚಿಸಿ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲಿದ್ದೀರಿ. ಚಿಂತೆ ಬೇಡ.

ಮಕರ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುವುದು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದ್ದು, ಹೊಸ ಯೋಜನೆಗಳಿಗೆ ಕೈಹಾಕಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ನಿಮ್ಮ ಮನಸ್ಸಿನಲ್ಲಿ ಕೊರೆಯುತ್ತಿರುವ ವಿಚಾರವನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಗೃಹಿಣಿಯರಿಗೆ ಕೆಲಸದೊತ್ತಡ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮೀನ: ಮಹಿಳೆಯರಿಗೆ ಶುಭ ಮಂಗಲ ಕಾರ್ಯಗಳಿಗಾಗಿ ಸಿದ್ಧತೆ ನಡೆಸುವ ಜವಾಬ್ಧಾರಿಯಿರಲಿದೆ. ಹಣಕಾಸಿನ ಅಚಡಣೆಗಳು ದೂರವಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವುದರ ಲಾಭಗಳು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಮುಂದಿನ ಸುದ್ದಿ
Show comments