Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 12 ಮಾರ್ಚ್ 2022 (08:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಂದರ್ಭಕ್ಕೆ ಸರಿಯಾಗಿ ಯೋಚನೆ ಮಾಡಿ ನಿರ್ಧಾರ ಕೈಗೊಳ್ಳುವುದರಿಂದ ಸಂಭಾವ್ಯ ಅಪಾಯ ತಪ್ಪಲಿದೆ. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಕಂಡುಬಂದು ಸಂತೋಷವಾಗಲಿದೆ. ಅನಗತ್ಯ ವಿವಾದಗಳನ್ನು ಮೈಮೇಲೆಳೆದುಕೊಳ್ಳಬೇಡಿ.

ವೃಷಭ: ಉದ್ಯೋಗದಲ್ಲಿ ಉನ್ನತ ಸ್ಥಾನ ಮಾನದ ಯೋಗ ಕೂಡಿಬರಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗವಿದೆ. ದೂರದ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಗೃಹೋಪಕರಣಗಳ ಖರೀದಿಗೆ ನೆಮ್ಮದಿ ಸಿಗಲಿದೆ.

ಮಿಥುನ: ದೀರ್ಘ ಪ್ರಯಾಣದಿಂದ ದೇಹಾಯಾಸವಾಗುವ ಸಂಭವವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನ ಸಾಧ‍್ಯತೆ. ಇಷ್ಟಭೋಜನ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ನಿಮ್ಮ ದೂರದೃಷ್ಟಿಯಿಂದ ವೃತ್ತಿರಂಗದಲ್ಲಿ ನಿರೀಕ್ಷಿತ ಮುನ್ನಡೆ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಅವಕಾಶಗಳು ಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕಷ್ಟೇ. ತಾಳ್ಮೆಯಿರಲಿ.

ಸಿಂಹ: ಮನಸ್ಸಿಗೆ ಖುಷಿಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಅಧಿಕ ಧನ ಸಂಪಾದನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಚಿಂತೆ ಬೇಡ.

ಕನ್ಯಾ: ಕಾರ್ಯರಂಗದಲ್ಲಿ ಉನ್ನತಾಧಿಕಾರದ ಯೋಗ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಮಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ತುಲಾ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರುವುದು. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಂತೂ ಆಗದು. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.

ವೃಶ್ಚಿಕ: ನಿರೀಕ್ಷಿತ ಸಮಯದಲ್ಲಿ ಧನ ಸಹಾಯ ಕೂಡಿಬರಲಿದ್ದು, ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ತಕ್ಕ ಫಲ ಸಿಗಲಿದೆ.

ಧನು: ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಸಂಗಾತಿಯಿಂದ ಸುಖ ಪ್ರಾಪ್ತಿಯಾಗಲಿದೆ. ನಿರೀಕ್ಷಿತ ಸಮಯದಲ್ಲಿ ಸಹಾಯ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ದೂರದ ವ್ಯವಹಾರಗಳಿಂದ ಧನಾದಾಯ ವೃದ್ಧಿಯಾಗುವುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.

ಕುಂಭ: ಆಸ್ತಿ ವ್ಯವಹಾರ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿದೆ. ಮಕ್ಕಳಿಂದ ಸಂತೋಷ ವೃದ್ಧಿಯಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮೀನ: ಮಹಿಳೆಯರಿಗೆ ಚಿನ್ನಾಭರಣಗಳನ್ನು ಸಂರಕ್ಷಿಸು ಹೊಣೆ ಬೀಳಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತಮ ಅವಕಾಶ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಮುಂದಿನ ಸುದ್ದಿ
Show comments