Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 25 ಮಾರ್ಚ್ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೈಹಿಕವಾಗಿ ಆರೋಗ್ಯ ಉತ್ತಮವಾಗಲಿದ್ದು, ಹೊಸ ಯೋಚನೆಗಳು ಮನಸ್ಸಿಗೆ ಬರಲಿವೆ. ಆರ್ಥಿಕವಾಗಿ ಕೆಲವೊಂದು ಯೋಜನೆ ಹಾಕಿಕೊಳ್ಳಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ತಾಳ್ಮೆಯಿರಲಿ.

ವೃಷಭ: ನೀವು ಮುಂದೆ ಮಾಡಬೇಕಾದ ಕೆಲಸಗಳಿಗೆ ಇಂದೇ ತಯಾರಿ ಮಾಡಿಕೊಳ್ಳಬೇಕಾಗುತ್ತದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಬಹುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಚಿಂತೆ ಬೇಡ.

ಮಿಥುನ: ನಿಮ್ಮಿಂದ ಪೋಲಾದ ವಸ್ತುವನ್ನು ಮರಳಿ ಪಡೆಯಲು ಯತ್ನಿಸಲಿದ್ದೀರಿ. ನಿಮ್ಮ ಪ್ರಾಮಾಣಿಕ ಪ್ರಯತ್ನಗಳಿಗೆ ಮನೆಯವರ ಸಹಕಾರವಿರಲಿದೆ. ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬರಲಿದೆ.

ಕರ್ಕಟಕ: ಉದ್ಯೋಗ ರಂಗದಲ್ಲಿ ನಿಮಗೆ ಅಡೆತಡೆಯಾಗಿದ್ದ ಸಮಸ್ಯೆಗಳು ಪರಿಹಾರವಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯುವುದು. ಪ್ರೇಮಿಗಳಿಗೆ ಮನಸ್ಸಿನಲ್ಲಿದ್ದನ್ನು ಹೇಳಲು ಇದು ಸಕಾಲ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಯಾವುದೇ ಕೆಲಸ ಮಾಡುವ ಮೊದಲು ಹಿರಿಯರೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ಭವಿಷ್ಯದ ನಿಟ್ಟಿನಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕನ್ಯಾ: ಕಷ್ಟ-ಸುಖವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳುವುದು ಉತ್ತಮ. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾದೀತು. ಧನಾತ್ಮಕ ಯೋಚನೆಯಿರಲಿ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವೈಯಕ್ತಿಕವಾಗಿ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರ ಸಂದರ್ಶನ ಯೋಗ.

ವೃಶ್ಚಿಕ: ಹಿರಿಯರ ಮಾರ್ಗದರ್ಶನದಂತೆ ಕೈಗೊಳ್ಳುವ ಕೆಲಸಗಳು ಯಶಸ್ವಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ. ತಾಳ್ಮೆ ಅಗತ್ಯ.

ಧನು: ಅತಿಯಾದ ಕೆಲಸದೊತ್ತಡದಿಂದ ದೇಹಾಯಾಸವಾಗುವ ಸಾಧ‍್ಯತೆ. ಸಂಗಾತಿಯ ಸಾಂತ್ವನದ ಮಾತು ಸಮಾಧಾನ ತಂದೀತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಯಾವುದೇ ಲಾಭ ಉದ್ದೇಶವಿಲ್ಲದೇ ಮಾಡುವ ಕೆಲಸಗಳಿಂದ ಪುಣ್ಯ ಪ್ರಾಪ್ತಿಯಾಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕೆಲಸದೊತ್ತಡ ಕಡಿಮೆಯಾದೀತು. ಅನಗತ್ಯ ವಿಚಾರಗಳಿಗೆ ಮೂಗು ತೂರಿಸಲು ಹೋಗಬೇಡಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಗಮನವಿರಲಿ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಮೀನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂಧ ಕೂಡಿಬರಲಿದೆ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ನಿಮ್ಮ ಸತತ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ