ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 28 ಮಾರ್ಚ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರುವುದು. ಮನಸ್ಸಿಗೆ ಉಲ್ಲಾಸಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವ್ಯಾವಹಾರಿಕವಾಗಿ ಅಡೆತಡೆಗಳು ನಿವಾರಣೆಯಾಗಲಿವೆ. ಚಿಂತ ಬೇಡ.

ವೃಷಭ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನೆರೆಹೊರೆಯವರೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ವಾಹನ ಖರೀದಿಗೆ ಯೋಗ ಕೂಡಿಬರುವುದು.

ಮಿಥುನ: ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದ್ದು, ಮಾನಸಿಕವಾಗಿ ನೆಮ್ಮದಿಯಿರಲಿದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ಆರೋಗ್ಯದಲ್ಲಿ ಸುಧಾರಣೆ.

ಕರ್ಕಟಕ: ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಕಂಡುಬರಲಿದೆ. ಧನಾರ್ಜನೆಗಾಗಿ ನಾನಾ ಮಾರ್ಗಗಳನ್ನು ಹುಡುಕಿಕೊಳ್ಳಲಿದ್ದೀರಿ. ಭೂಮಿ, ವಾಹನಾದಿ ಸೌಕರ್ಯಗಳಿಗಾಗಿ ಧನವ್ಯಯ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ ಕಂಡುಬರುವುದು.

ಸಿಂಹ: ಮಾನಸಿಕವಾಗಿ ಕಾಡುವ ಚಿಂತೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ ಕಂಡುಬರುವುದು. ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಹಿಳೆಯರಿಗೆ ಉನ್ನತ ಸ್ಥಾನ ಮಾನದ ಯೋಗ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಗೃಹೋಪಕರಣಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕುಟುಂಬದವರೊಂದಿಗೆ ಚರ್ಚಿಸಿದರೆ ಉತ್ತಮ. ನಾನಾ ರೀತಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ವೃಶ್ಚಿಕ: ನಿಮ್ಮ ಸಾಮರ್ಥ್ಯಕ್ಕೂ ಮೀರಿದ ಕೆಲಸ ಮಾಡಬೇಕಾಗುತ್ತದೆ. ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ಮಹಿಳೆಯರಿಗೆ ಅಡುಗೆ ಮನೆ ಕೆಲಸಗಳಲ್ಲಿ ಸಣ್ಣ ಪುಟ್ಟ ತೊಂದರೆಗಳು ಎದುರಾದೀತು.

ಧನು: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಬಹುದಿನಗಳ ನಂತರ ಪ್ರೀತಿ ಪಾತ್ರರನ್ನು ಭೇಟಿಯಾಗುವ ಸಂತೋಷ ನಿಮ್ಮದಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನಿಮ್ಮ ಹೊಸ ಪ್ರಯತ್ನಗಳಿಗೆ ಕುಟುಂಬಸ್ಥರ ಬೆಂಬಲ ಸಿಗಲಿದೆ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಲ್ಲಿ ಆಸಕ್ತಿ ಕಂಡುಬರುವುದು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ. ನಿರುದ್ಯೋಗಿಗಳಿಗೆ ಹೊಸ ಭರವಸೆ ಸಿಗಲಿದೆ.

ಮೀನ: ನೀವು ಅಂದುಕೊಂಡ ಕೆಲಸ ಪೂರ್ತಿ ಮಾಡಲು ನೂರೆಂಟು ವಿಘ್ನಗಳು ಕಂಡುಬರಲಿದೆ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರುವುದು. ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದ್ವಾದಶ ರಾಶಿಯವರಿಗೆ 2026 ರಲ್ಲಿ ಪ್ರೇಮ ಸಂಬಂಧದ ಭವಿಷ್ಯ ಹೇಗಿರಲಿದೆ

ಭಯವಾಗುತ್ತಿದ್ದರೆ ಪ್ರಭು ರಾಮಚಂದ್ರನ ಈ ಸ್ತೋತ್ರವನ್ನು ಓದಿ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments